ಧಾರವಾಡ prajakiran.com : ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಲಕಮನಹಳ್ಳಿ ಗ್ರಾಮದಲ್ಲಿ ಸುಮಾರು 10 ಎಕರೆ ಅನಧಿಕೃತ ಲೇಔಟಗಳನ್ನು ತೆರವುಗೊಳಿಸಲಾಯಿತು.
ಇದೆ ಸಂದರ್ಭದಲ್ಲಿ ಅಧ್ಯಕ್ಷರು ಮಾತನಾಡಿ ಒಂದು ವಾರದ ಹಿಂದೆ ಕಾರ್ಯಾಚರಣೆ ಸಡೆಸಿದರೂ ಸಹ ಮತ್ತೆ ಪ್ಲಾಟ ಕಲ್ಲುಗಳನ್ನು ಹಾಕಿದ್ದಾರೆ.
ನಗರಾಭಿವೃದ್ಧಿ ಪ್ರಾಧಿಕಾರದಿಂದ ನಡೆಸುತ್ತಿರುವ ಕಾರ್ಯಾಚರಣೆ ನಿಲ್ಲಿಸುವುದಿಲ್ಲ ಎಂದು ಹುಡಾ ಅಧ್ಯಕ್ಷ ನಾಗೇಶ್ ಕಲಬುರ್ಗಿ ಹೇಳಿದರು.
ಈ ಸಂದರ್ಭದಲ್ಲಿ ಹುಡಾ ಸದಸ್ಯರಾದ ಚಂದ್ರಶೇಖರ ಗೋಕಾಕ. ಸುನೀಲ ಮೊರೆ. ಆಯುಕ್ತರಾದ ಎನ್ ಹೆಚ್ ಕುಮ್ಮಣ್ಣನವರ. ನಗರ ಯೋಜಕ ಸದಸ್ಯರಾದ ವಿವೇಕ ಕಾರೇಕರ ಕಾರ್ಯನಿರ್ವಾಹಕ ಅಧಿಕಾರಿ ಎಂ ರಾಜಶೇಖರ್ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ರಾಜೇಂದ್ರ ಕೊಕ್ಕಳಕಿ. ಉಮೇಶ್ ಬೇವೂರ್. ಇಂಜಿನಿಯರಾದ ಬಸವರಾಜ ದೇವಗಿರಿ. ಮುಕುಂದ ಜೋಶಿ. ಬಡಿಗೇರ ಇದ್ದರು.