ರಾಜ್ಯ

ಧಾರವಾಡ ಸೇರಿ 10 ಜಿಲ್ಲೆಯ ಕೋವಿಡ್ ಪ್ರಕರಣ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ

ಧಾರವಾಡ prajakiran.com : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗುರುವಾರ ಸಂಜೆ ಹೆಚ್ಚು ಕೊರೋನಾ ಪ್ರಕರಣಗಳು ವರದಿಯಾಗುತ್ತಿರುವ 10 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ CEOಗಳೊಂದಿಗೆ  ಸಭೆ ನಡೆಸಿ, ಕೋವಿಡ್ ನಿಯಂತ್ರಣ ಕ್ರಮಗಳ ಕುರಿತಂತೆ ಸೂಕ್ತ ನಿರ್ದೇಶನ ನೀಡಿದರು.

ಧಾರವಾಡ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ: ಬಿ.ಸಿ. ಸತೀಶ್ ಅವರೊಂದಿಗೆ ಜಿಲ್ಲಾ ಪಂಚಾಯತ್ ವಿ.ಸಿ. ಹಾಲ್‌ನಲ್ಲಿ ಸಂವಾದ ನಡೆಸಿ ಪ್ರಗತಿ ಪರಿಶೀಲನೆ ಮಾಡಿದರು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಧಾರವಾಡ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣಾ ಕರ್ತವ್ಯದಲ್ಲಿರುವುದರಿಂದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯಕಾರ್ಯನಿರ್ವಾಹಕ ಅಧಿಕಾರಿ ಡಾ: ಬಿ.ಸಿ. ಸತೀಶ್ ಅವರು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಕೈಗೊಂಡ ಕ್ರಮಗಳ ಕುರಿತು ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಧಾರವಾಡ ಜಿಲ್ಲೆಯಲ್ಲಿ ಮಾಸ್ಕ್ ಅಭಿಯಾನ, ಸ್ವ್ಯಾಬ್ ಸಂಗ್ರಹ ಹಾಗೂ ಸೋಂಕಿತರ ಚಿಕಿತ್ಸೆ ಕುರಿತು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಹಿರಿಯ ಅಧಿಕಾರಿಗಳ ತಂಡಗಳನ್ನು ರಚಿಸಿ ಪ್ರಮುಖ ಜನಸಂದಣಿ ಇರುವ ಪ್ರದೇಶಗಳಲ್ಲಿ ತಪಾಸಣೆ ಮಾಡಿ ಮಾಸ್ಕ್ ಧರಿಸದ ಮತ್ತು ಸಾಮಾಜಿಕ ಅಂತರ ಪಾಲನೆ ಮಾಡದವರಿಂದ ದಂಡ ಸಂಗ್ರಹದೊಂದಿಗೆ ಸ್ವ್ಯಾಬ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ಮಾಸ್ಕ್ ಧರಿಸದವರಿಗೆ ದಂಡಕ್ಕಿಂತ ಹೆಚ್ಚಾಗಿ ಜಾಗೃತಿ ಮೂಡಿಸುವ ಮತ್ತು ಅವರನ್ನು ತಪಾಸಣೆಗೆ ಒಳಪಡಿಸುವ ಕ್ರಮಕ್ಕೆ ಒತ್ತು ನೀಡಲಾಗುತ್ತಿದೆ ಎಂದು ಅವರು ವಿವರಿಸಿದರು.

ಸಂವಾದದಲ್ಲಿ ಮುಖ್ಯಮಂತ್ರಿಗಳೊಂದಿಗೆ ಕಂದಾಯ ಸಚಿವ ಆರ್. ಅಶೋಕ, ವೈದ್ಯಕೀಯ ಸಚಿವ ಡಾ: ಸುಧಾಕರ್, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಮುಖ್ಯಕಾರ್ಯದರ್ಶಿ ವಿಜಯಭಾಸ್ಕರ್, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್, ಆಯುಕ್ತ ಪಂಕಜ್‌ಕುಮಾರ್ ಪಾಂಡೆ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *