ಧಾರವಾಡ prajakiran.com : ಧಾರವಾಡ ಜಿಲ್ಲೆಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿ ಸೋದರ ಮಾವ
ಚಂದ್ರಶೇಖರ ಇಂಡಿಯನ್ನು 2 ದಿನ ಸಿಬಿಐ ಕಸ್ಟಡಿಗೆ ವಹಿಸಲಾಗಿದೆ.
ಧಾರವಾಡದ ಮೂರನೇ ಅಧಿಕ ಹಾಗೂ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಗಂಗಾಧರ ಸಿ.ಎಂ. ಅವರು ಈ ಮಹತ್ವದ ತೀರ್ಪು ನೀಡಿದರು.
ಡಿ. 17ರ ಸಂಜೆ 5ರೊಳಗೆ ಮತ್ತೆ ಕೋರ್ಟ್ಗೆ ಹಾಜರ್ ಪಡಿಸಲು ಸೂಚನೆ ನೀಡಿದರು.
ಚಂದ್ರಶೇಖರ ಇಂಡಿ ಅಲಿಯಾಸ್ ಚಂದೂ ಮಾಮ ವಿನಯ ಕುಲಕರ್ಣಿ ಸೋದರ ಮಾವ.
ನಿನ್ನೆಯಷ್ಟೇ ಚಂದ್ರಶೇಖರ ಇಂಡಿಗೆ
ಧಾರವಾಡದ ಮೂರನೇ ಅಧಿಕ ಹಾಗೂ ಸಿಬಿಐ ವಿಶೇಷ ನ್ಯಾಯಾಲಯ ಹದಿನಾಲ್ಕು ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
ಇವರ ಮೇಲೆ ಧಾರವಾಡ ಜಿಲ್ಲೆಯ ಜಿಪಂ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ಆರೋಪಿಗಳಿಗೆ ಅಕ್ರಮವಾಗಿ ಪಿಸ್ತೂಲ್ ಸರಬರಾಜು ಮಾಡಿದ ಆರೋಪ ಎದುರಿಸುತ್ತಿದ್ದಾರೆ.