ಜಿಲ್ಲೆ

ಧಾರವಾಡ : ಮೇ. 22, 23 ರ ಬೆಳಿಗ್ಗೆ 6 ರಿಂದ 8 ಗಂಟೆವರೆಗೆ ಹಾಲು, ತರಕಾರಿ, ಹಣ್ಣು ಖರೀದಿಗೆ ಅವಕಾಶ

ಸಂಪೂರ್ಣ ಲಾಕ್‍ಡೌನ್ ಅವಧಿಯಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ 

ಧಾರವಾಡ prajakiran. com : ಧಾರವಾಡ ಜಿಲ್ಲೆಯಲ್ಲಿ ನಾಳೆ (ಮೇ 22ರ) ಬೆಳಿಗ್ಗೆ 6 ಗಂಟೆಯಿಂದ ಮೇ 24ರ ಬೆಳಿಗ್ಗೆ 6 ಗಂಟೆಯವರೆಗೆ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಿ ಸಂಪೂರ್ಣ ಲಾಕ್‍ಡೌನ್ ಘೋಷಿಸಲಾಗಿದ್ದು, ಸಾರ್ವಜನಿಕರು ಸಹಕಾರ ನೀಡಿ, ಕೋವಿಡ್ ತಡೆಗಟ್ಟುವುದಕ್ಕಾಗಿ ಲಾಕ್‍ಡೌನ್ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ವಿನಂತಿಸಿದರು.

ಅವರು ಇಂದು ಸಂಜೆ ಧಾರವಾಡ ಮಾಧ್ಯಮ ಪ್ರತಿನಿಧಿಗಳೊಂದಿಗೆ ವರ್ಚವಲ್ ಆನ್‍ಲೈನ್ ಮೂಲಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಜಿಲ್ಲೆಯ ಹಿರಿಯ ಅಧಿಕಾರಿಗಳು ಸಹ ಭಾಗವಹಿಸಿದ್ದರು.

ಲಾಕ್‍ಡೌನ್ ಅವಧಿಯ ಎರಡು ದಿನ ಬೆಳಿಗ್ಗೆ 6 ರಿಂದ 8 ಗಂಟೆಯವರೆಗೆ ನಾಗರಿಕರು ತಮ್ಮ ಮನೆಗೆ ಹತ್ತಿರವಿರುವ ವ್ಯಾಪಾರಿಗಳಿಂದ ಹಾಲು, ಹಣ್ಣು ಮತ್ತು ತರಕಾರಿಗಳನ್ನು ಖರೀದಿಸಲು ಅವಕಾಶ ನೀಡಲಾಗಿದೆ.

ಆಸ್ಪತ್ರೆ, ಔಷಧ ಅಂಗಡಿ ಎಂದಿನಂತೆ ತೆರೆದಿರುತ್ತವೆ. ಸರಕುವಾಹನ, ಸರ್ಕಾರಿವಾಹನ ಹಾಗೂ ಕೋವಿಡ್ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಮತ್ತು ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಆಹಾರ ಸಂಸ್ಕರಣಾ ಘಟಕಗಳು, ಪೇರಿಸೇಬಲ್ ಸರಕು ಮತ್ತು ಕೆಲವು ನಿರ್ಧಿಷ್ಠ ಕೈಗಾರಿಕೆಗಳಿಗೆ ಮಾತ್ರ ಅವಕಾಶವಿದ್ದು, ಉಳಿದಂತೆ ಎಲ್ಲ ಕೈಗಾರಿಕೆ, ಕಟ್ಟಡ ನಿರ್ಮಾಣ, ಕಿರಾಣಿ ಅಂಗಡಿ, ಹೋಟೆಲ ಸೇರಿದಂತೆ ಎಲ್ಲವುಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಕೃಷಿ ಚಟುವಟಿಕೆಗೆ ಪೂರಕವಾದ ಬಿತ್ತನೆ ಬೀಜ, ರಸಗೊಬ್ಬರಗಳನ್ನು ರೈತರು ಬೆಳಿಗ್ಗೆ ಅನುಮತಿಸಿರುವ ಅವಧಿಯಲ್ಲಿ ತಮ್ಮ ಗ್ರಾಮ ಅಥವಾ ಸಮೀಪದ ಹೊಬಳಿ, ತಾಲೂಕುಗಳಿಂದ ಖರೀದಿಸಬೇಕು.

ಸಮಯ ಮೀರಿ ಅನಾವಶ್ಯಕವಾಗಿ ಸಂಚರಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

*ಗ್ರಾಮ ಮಟ್ಟದಲ್ಲಿ ಕೋವಿಡ್ ಕಾಳಜಿ ಕೇಂದ್ರ ತೆರೆಯಲು ಅನುಮತಿ*: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಅನುಗುಣವಾಗಿ ಕೋವಿಡ್ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಧಾರವಾಡದ ಬಿ.ಡಿ.ಜತ್ತಿ, ಸಿ.ಬಿ.ಗುತ್ತಲ್, ಕವಿವಿ ಆವರಣದ ವಿದ್ಯಾರ್ಥಿನಿಯರ ವಸತಿ ನಿಲಯ, ಹುಬ್ಬಳ್ಳಿಯ ದೇಶಪಾಂಡೆ ಪೌಂಡೆಶನ್,ಸಂಜೀವಿನಿ ಆಯುರ್ವೆದ ಮಹಾ ವಿದ್ಯಾಲಯ ಹಾಗೂ ವಿವಿಧ ಸರ್ಕಾರೆತರ ಸಂಘ ಸಂಸ್ಥೆಗಳು ಆರಂಭಿಸಿರುವ ಕಾಳಜಿ ಕೇಂದ್ರಗಳು ಮತ್ತು ಪ್ರತಿ ತಾಲೂಕಾ ಕೇಂದ್ರ ಸ್ಥಾನದಲ್ಲಿ 100 ಬೆಡ್‍ಗಳ ಕಾಳಜಿ ಕೇಂದ್ರಗಳನ್ನು ಆರಂಭಿಸಲಾಗಿದೆ.

ಆದರೆ ಬಹುತೇಕರು ಹೋಮ್ ಐಸೋಲೆಷನ್ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಪ್ರತಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಮತ್ತು ಅಗತ್ಯವಿದ್ದರೆ ಪ್ರತಿ ಗ್ರಾಮ ಮಟ್ಟದಲ್ಲಿ ಕೋವಿಡ್ ಕಾಳಜಿ ಕೇಂದ್ರಗಳನ್ನು ಆರಂಭಿಸಲು ಗ್ರಾಮಮಟ್ಟದ ಕೋವಿಡ್ ಕಾರ್ಯಪಡೆಗಳಿಗೆ ಸೂಚಿಸಲಾಗಿದೆ.

ಅಲ್ಲಿ ಅಗತ್ಯವಿರುವ ಔಷದಿ,ü ಆಹಾರ ಮತ್ತು ಇತರೆ ಸೌಲಭ್ಯಗಳನ್ನು ಜಿಲ್ಲಾಡಳಿತದಿಂದ ಪೂರೈಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಹಾನಗರ ಪೊಲೀಸ್ ಆಯುಕ್ತ ಲಾಬುರಾಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಮಾತನಾಡಿದರು.

ಪತ್ರಿಕಾಗೋಷ್ಠಿ ಪೂರ್ವದಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ, ಪೊಲೀಸ್ ಆಯುಕ್ತ ಲಾಬುರಾಮ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಅವರು ಜಿಲ್ಲೆಯ ಸಾರ್ವಜನಿಕರೊಂದಿಗೆ ವರ್ಚವಲ್ ಸಭೆ ಜರುಗಿಸಿ ಲಾಕ್‍ಡೌನ್ ಮಾಹಿತಿಯನ್ನು ನೀಡಿ, ಅವರ ಪ್ರಶ್ನೆಗಳಿಗೆ ಉತ್ತರಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *