ಅಂತಾರಾಷ್ಟ್ರೀಯ

ಧಾರವಾಡದಲ್ಲಿ ಕಳ್ಳರನ್ನು ಹಿಡಿಯಲು ಬಂದ ಪೊಲೀಸರ ಮೇಲೆಯೇ ಬಿಯರ್ ಬಾಟಲಿಯಿಂದ ಹೊಡೆದ ಇರಾನಿ ಗ್ಯಾಂಗ್ ……!

ಧಾರವಾಡ prajakiran.com : ಆಂಧ್ರದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇರಾನಿ ಗ್ಯಾಂಗ್ ಕಳ್ಳರನ್ನು ಹಿಡಿಯಲು ಬಂದ ಆಂಧ್ರ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಘಟನೆ ಧಾರವಾಡದಲ್ಲಿ ಗುರುವಾರ ನಡೆದಿದೆ.

ಧಾರವಾಡದ ಸಂಗಮ್ ವೃತ್ತದ ಬಳಿಯ ಲೈನ್ ಬಜಾರ ಹನುಮಪ್ಪನ ಗುಡಿ ಬಳಿ ಈ ಘಟನೆ ನಡೆದಿದ್ದು, ಇರಾನಿ ಗ್ಯಾಂಗ್ ನ ಕಳ್ಳರು ಪೊಲೀಸರ ಮೇಲೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ ಮಾಡಿದ್ದಾರೆ.

ಜೊತೆಗೆ ತಮಗೆ ತಾವೇ ಬಿಯರ್ ಬಾಟಲಿಯಿಂದ ಇರಿದುಕೊಂಡು ರಂಪಾಟ ಮಾಡಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಕೆಲ ಕಾಲ ಬಿಗುವಿನ ವಾತವರಣ ನಿರ್ಮಾಣವಾಗಿತ್ತು.

ಬಳಿಕ ಮೂವರು ಆರೋಪಿಗಳು ಒಂದೇ ಬೈಕ್ ಮೇಲೆ
ಸ್ಥಳದಿಂದ ಪರಾರಿಯಾಗಿದ್ದಾರೆ.

ತಕ್ಷಣವೇ
ಗಾಯಾಳು ಪೊಲೀಸರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಧಾರವಾಡ ಎಸಿಪಿ ಜಿ. ಅನುಷಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಧಾರವಾಡ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ‌ ಘಟನೆ ಸಂಭವಿಸಿದೆ.
ಈ ದೃಶ್ಯಗಳನ್ನು ಸ್ಥಳೀಯ ಜನತೆ ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಆ ದೃಶ್ಯ ಪ್ರಜಾಕಿರಣ.ಕಾಮ್ ಗೆ ಲಭ್ಯವಾಗಿವೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *