ಧಾರವಾಡ prajakiran. com : ವಾಲ್ಮೀಕಿ ಸಮಾಜದ ಮುಖಂಡರಾದ ಈರಣ್ಣ ಮಲ್ಲಿಗವಾಡ ಅವರು ಇಂದು ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು.
ಅವರಿಗೆ ಸಂಜೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಎಸ್ ಡಿ ಎಂ ಆಸ್ಪತ್ರೆ ಗೆ ಕರೆದುಕೊಂಡು ಹೋಗಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದರು.
ಅವರಿಗೆ 62 ವರ್ಷ ವಯಸ್ಸಾಗಿತ್ತು.
ಅವರ ಅಂತಿಮ ಕ್ರಿಯೆ ಧಾರವಾಡದ
ಹೊಸಯಲ್ಲಾಪುರ ರುದ್ರಭೂಮಿ
ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.
ಗಾಂಧಿನಗರ ನಿವಾಸದಿಂದ ಅಂತಿಮಯಾತ್ರೆ ಹೊರಡಲಿದೆ.
ಅವರು ಪತ್ನಿ ಹಾಗೂ ಮಕ್ಕಳು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಅವರ ನಿಧನಕ್ಕೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.