ರಾಜ್ಯ

ಬಿಜೆಪಿ ಶಾಸಕ ಅಮೃತ ದೇಸಾಯಿ ವಿರುದ್ದ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ವಾಗ್ದಾಳಿ

ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಗ್ರಾಮೀಣ ಬಿಜೆಪಿ ಶಾಸಕ ಅಮೃತ ದೇಸಾಯಿ ಅನಗತ್ಯವಾಗಿ ಸಮಾಜದ ಶಾಂತಿ, ಸೌಹಾರ್ದತೆಗೆ ಪದೇ ಪದೇ ಧಕ್ಕೆ ಉಂಟು ಮಾಡುವ ಹೇಳಿಕೆ ನೀಡುತ್ತಿರುವುದು ಅವರಿಗೆ ಶೋಭೆ ನೀಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯ ಘಟನೆಯಲ್ಲಿ 160ಕ್ಕೂ ಹೆಚ್ಚು ಅಮಾಯಕರ ಬಂಧನದ ಪರ ಮಾತನಾಡಿದರೆ ಶಾಂತಿ ಕದಡುವ ಕೆಲಸವಾಗುವುದಿಲ್ಲ. ಬದಲಿಗೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಅಂತಹವರನ್ನು ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಕರೆ ತಂದು ಅವರ ಮೂಲಕ ಇನ್ನೊಬ್ಬರ ಬಗ್ಗೆ ಅವಾಚ್ಯ ಶಬ್ದಗಳ ಪದ ಪ್ರಯೋಗ, ಹೀಯಾಳಿಸುವ ಕೆಲಸ ಮಾಡಿದರೆ ಖಂಡಿತ ಶಾಂತಿ ಕದಡುತ್ತದೆ ಎಂಬುದನ್ನು ಮರೆಯಬಾರದು ತಿರುಗೇಟು ನೀಡಿದ್ದಾರೆ.

ಅಮಾಯಕರ ಬಿಡುಗಡೆ ಮಾಡಿಸುವುದು ಸಮಾಜದ ಜವಾಬ್ದಾರಿ. ಶಾಸಕರು ಜನರ ಪರವಾಗಿ ಇರಬೇಕು. ಹೊರತು ದಿಕ್ಕು ತಪ್ಪಿಸುವ ಕೆಲಸ ಮಾಡಬಾರದು ಎಂದು ಕುಟುಕಿದರು.

ಶಾಸಕರು ಮೊದಲು ಹಳ್ಳಿಗಳಲ್ಲಿ ಸಂಚರಿಸಿ ಬಡ ರೈತರ ಸಮಸ್ಯೆ ಬಗೆ ಹರಿಸಲಿ, ನಂತರ ಬೇಡದ ವಿಚಾರಗಳಲ್ಲಿ ಆಸಕ್ತಿ ತೋರಲಿ ಎಂದು ಸಲಹೆ ನೀಡಿದ್ದಾರೆ.

ಕಳೆದ 10 ವರ್ಷಗಳ ಆಡಳಿತ ನೋಡಿದ ನಮ್ಮ ಧಾರವಾಡ ಗ್ರಾಮೀಣ ಮತದಾರರು ಮೌನವಾಗಿದ್ದಾರೆ. ಈ ಬಾರಿ ಹೊಸ ಮುಖವನ್ನು ಶಾಸಕರಾಗಿ ಆಯ್ಕೆ ಮಾಡಿ ದೇಸಾಯಿ ಮನೆಗೆ ಕಳುಹಿಸಲಿದ್ದಾರೆ ಎಂದು ಗುಡುಗಿದ್ದಾರೆ.

ನಾನು ಹಳೆ ಹುಬ್ಬಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಅಮಾಯಕರ‌ ಪರ ಹೋರಾಟ ನಡೆಸುತ್ತೇನೆ ಎಂದು ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಸ್ಪಷ್ಟ ಪಡಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *