ರಾಜ್ಯ

ವಿನಯ್ ಕುಲಕರ್ಣಿ ಆಪ್ತ ಪ್ರಶಾಂತ ಕೇಖರೆ ಮನೆ ಮೇಲೆ ಐಟಿ ದಾಳಿ

ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರ ಆಪ್ತ ಪ್ರಶಾಂತ ಕೇಖರೆ ಮನೆ ಮೇಲೆ ಗುರುವಾರ ಸಂಜೆ ಐಟಿ ದಾಳಿ ಮಾಡಲಾಗಿದೆ.

ಧಾರವಾಡದ ಸಪ್ತಾಪುರದಲ್ಲಿ ಪ್ರಶಾಂತ ಮನೆ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ ಅರ್ಧ ಗಂಟೆಯಿಂದಲೂ ಅನೇಕ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಚುನಾವಣೆ ಹೊಸ್ತಿಲಿನಲ್ಲೇ ವಿನಯ್ ಕುಲಕರ್ಣಿಗೆ ಮತ್ತೆ ಶಾಕ್ ನೀಡಲಾಗಿದೆ.

ಪ್ರಶಾಂತ ಕೇಖರೆ ಚುನಾವಣೆ ವೇಳೆ ಇದು ಸಹಜ ಎನ್ನುತ್ತಲೇ ಐಟಿ ಅಧಿಕಾರಿಗಳಿಗೆ ಮನೆಯ ಕೀ ನೀಡಿ ಅವರನ್ನು ಒಳಗಡೆ ಕರೆದುಕೊಂಡು ಹೋಗಿದ್ದಾರೆ.

ಕಳೆದ ಬಾರಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೂಡ ಪ್ರಶಾಂತ್ ಕೇಖರೆ ಮನೆ ಮೇಲೆ ದಾಳಿ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *