ಹುಬ್ಬಳ್ಳಿ prajakiran.com : ಮಾಜಿ ಸಚಿವ ವಿನಯ ಕುಲಕರ್ಣಿ ಬಿಜೆಪಿ ಸೇರ್ಪಡೆಗೆ ಯತ್ನಿಸುತ್ತಿರುವ ವಿಚಾರ ಕುರಿತು ಹುಬ್ಬಳ್ಳಿಯಲ್ಲಿ ಧಾರವಾಡ ಉಸ್ತುವಾರಿ ಸಚಿವ ಹಾಗೂ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ನಮ್ಮನ್ನು ಯಾರೂ ಸಂಪರ್ಕಿಸಿಲ್ಲ, ನಾವೂ ಯಾರನ್ನೂ ಸಂಪರ್ಕಿಸಿಲ್ಲ. ವಿನಯ ಕುಲಕರ್ಣಿ ಬಿಜೆಪಿ ಸೇರುವ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ನುಣುಚಿಕೊಂಡಿದ್ದಾರೆ.
ನಮ್ಮ ಪಾರ್ಟಿಗೆ ಸೇರ್ತಾರೋ, ಬಿಡ್ತಾರೋ ಏನೂ ಗೊತ್ತಿಲ್ಲ. ನಮ್ಮ ವರಿಷ್ಠರು ಕೂಡ ಈ ಬಗ್ಗೆ ನಮ್ಮ ಜೊತೆ ಚರ್ಚಿಸಿಲ್ಲ ಎಂದು ಹೇಳಿದರು.
ವಿನಯ ಕುಲಕರ್ಣಿ ಅಥವಾ ಅವರ ಪರವಾಗಿ ಯಾರೂ ಸ್ಟೇಟ್ಮೆಂಟ್ ಕೊಟ್ಟಿಲ್ಲ. ನನ್ನ ಗಮನಕ್ಕೆ ಬಂದರೆ ಪ್ರತಿಕ್ರಿಯೆ ಕೊಡುತ್ತೇನೆ ಎಂದು ಜಗದೀಶ ಶೆಟ್ಟರ್ ತಿಳಿಸಿದರು.