ರಾಜ್ಯ

ಜನರನ್ನು ನಿರ್ದಯವಾಗಿ ಹೊಡೆಯಬೇಡಿ : ನಟ ಜಗ್ಗೇಶ್ ಮನವಿ

ಬೆಂಗಳೂರು Prajakiran.com : ಕನ್ನಡದ ಹಿರಿಯ ನಟ ನವರಸ ನಾಯಕ ಜಗ್ಗೇಶ್ ತಮ್ಮ ಅಭಿಮಾನಿಗಳಿಗೆ ಹಾಗೂ ರಾಜ್ಯದ ಜನತೆಗೆ ಕೊರೋನಾ ಸೋಂಕಿನ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.

ಅಷ್ಟೇ ಅಲ್ಲದೆ ಅಗತ್ಯ ಇರುವವರಿಗೆ ತಮ್ಮ ಕೈಲಾದ ಸಹಾಯವನ್ನೂ ಮಾಡುತ್ತಿದ್ದಾರೆ.

ಇದೀಗ ಜಗ್ಗೇಶ್ ಅವರು ಸಾಮಾಜಿಕ ಜಾಲತಾಣದ ಮೂಲಕ ರಾಜ್ಯದ ಪೊಲೀಸರಿಗೆ ಒಂದು ಮನವಿ ಮಾಡಿಕೊಂಡಿದ್ದಾರೆ.

ಸರ್ಕಾರ ಹಾಗೂ ತಮ್ಮ ಆದೇಶ ಪಾಲಿಸದವರಿಗೆ ದಂಡ ಹಾಕಿ ವಾಹನ ಜಪ್ತಿಮಾಡಿ ತೊಂದರೆ ಇಲ್ಲಾ.

ಆದರೆ, ನಿರ್ದಯವಾಗಿ ಲಾಟಿಯಲ್ಲಿ ಹೊಡೆಯಬೇಡಿ. ಯುವಕರಾದರೆ ಪರವಾಗಿಲ್ಲಾ ತಡೆದುಕೊಳ್ಳುತ್ತಾರೆ.

ಆದರೆ, ವಯಸ್ಸಾದವರು ಪಾಪ ಯಾವ ಖಾಯಿಲೆ ಇರುತ್ತದೆ ಎಂದು ನಿಮಗೇನು ತಿಳಿದಿರುತ್ತದೆ. ಕೆಲ ಅಧಿಕಾರಿಗಳು ಒಂದು ಏಟುಕೊಟ್ಟು ಭಯಪಡಿಸುವ ಬದಲು ಪ್ರಾಣಹೋಗುವಂತೆ ಭಾರಿಸುತ್ತಾರೆ ಎಂದಿದ್ದಾರೆ.

ಇನ್ನು ಜನರಿಗೂ ಕಿವಿ ಮಾತು ಹೇಳಿರುವ ಜಗ್ಗೇಶ್, ಈ ಹಾಳಾದ ಕೋವಿಡ್ ಮನುಕುಲದ ಅನ್ನ ದುಡಿಮೆ ನೆಮ್ಮದಿಯ ಕಸಿದಿದೆ. ಮನುಷ್ಯರಾಗಿ ನಾವು ಮನುಷ್ಯತ್ವ ಪಾಲಿಸೋಣ.

ಈ ರೋಗ ಮನುಕುಲದ ಸಾವಿಗಾಗಿಯೇ ಬಂದಿದೆ. ಧರೆಯೇ ಹತ್ತಿ ಉರಿಯುತ್ತಿದೆ ದಯಮಾಡಿ ಸ್ವಲ್ಪ ದಿನ ವೈದ್ಯಲೋಕದ ಮಾತಿನಂತೆ ಕೆಲತಿಂಗಳು ಎಚ್ಚರವಾಗಿ ಇದ್ದುಬಿಡಿ ಎಂದು ಜನತೆಯಲ್ಲಿ ಮನವಿ ಮಾಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *