ಶ್ರೀನಗರ prajakiran. com : ಜಮ್ಮು ಕಾಶ್ಮೀರದ ಮಾಜಿ ಗವರ್ನರ್ ಜಗಮೋಹನ್ (94) ಇಂದು ನಿಧನರಾಗಿದ್ದಾರೆ.
ದೀರ್ಘಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳವಾರ ಬೆಳಗ್ಗೆ ಅಸುನೀಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, ಜಗಮೋಹನ್ ಜೀ ಅವರ ನಿಧನದಿಂದ ರಾಷ್ಟ್ರಕ್ಕೆ ದೊಡ್ಡ ನಷ್ಟವಾಗಿದೆ.
ಜಗಮೋಹನ್ ಅವರು ಖ್ಯಾತ ವಿದ್ವಾಂಸರಾಗಿದ್ದರು.
ಸದಾಕಾಲ ಭಾರತದ ಸುಧಾರಣೆಗೆ ಶ್ರಮಿಸಿದವರು. ಅವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಜಗಮೋಹನ್ ಅವರು ಜಮ್ಮು ಕಾಶ್ಮೀರ ಹಾಗೂ ಗೋವಾದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಬಳಿಕ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಕಾರ್ಯ ನಿರ್ವಹಿಸಿದ್ದರು.