ಬೆಂಗಳೂರು prajakiran.com : ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಅವರ ಧರ್ಮಪತ್ನಿ ಚೆನ್ನಮ್ಮ ಅವರಿಗೆ ಕರೋನಾ ಸೋಂಕು ಕಾಣಿಸಿಕೊಂಡಿದೆ.
ದಂಪತಿಗಳಿಗೆ ಸೋಂಕು ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸಂಪರ್ಕದಲ್ಲಿ ಬಂದಿರುವರಿಗೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ರೋಗ ಲಕ್ಷಣಗಳು ಇಬ್ಬರಲ್ಲೂ ಕಾಣಿಸಿದ್ದು, ವಯಸ್ಸನ್ನು ಪರಿಗಣಿಸಿ ವೈದ್ಯರ ನಿಗಾದಲ್ಲಿ ಇಡಲಾಗಿದೆ.
ಅವರು ಬೇಗನೇ ಚೇತರಿಸಿಕೊಂಡು ಮೊದಲಿನಂತೆ ಓಡಾಡಲಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.