ಜಿಲ್ಲೆ

ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಜೆಡಿಎಸ್ ನಿಂದ ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿ ಕಚೇರಿಗೆ ಮುತ್ತಿಗೆ ನಾಳೆ

ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಜೆಡಿಎಸ್ ನಿಂದ ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿ ಕಚೇರಿಗೆ ಮುತ್ತಿಗೆ
ಧಾರವಾಡ prajakiran.com :
ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಜನತಾದಳ(ಜ್ಯಾತ್ಯಾತೀತ) ವತಿಯಿಂದ ಕರ್ನಾಟಕ ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿ ಕಚೇರಿಗೆ ಡಿ. 22 ರಂದು ಬುಧವಾರ 11 ಗಂಟೆಗೆ ಮುತ್ತಿಗೆ ಹಾಕುವ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಾನಗರ ಜಿಲ್ಲೆಯ ಜೆಡಿಎಸ್ ಅಧ್ಯಕ್ಷ ಗುರುರಾಜ ಹುಣಸಿಮರದ ತಿಳಿಸಿದ್ದಾರೆ.
ಅವರು ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕಳೆದ 7 ವರ್ಷಗಳಿಂದ ಹು-ಧಾ ಮಹಾನಗರದಲ್ಲಿ ಬಡಜನರಿಗೆ ಹಂಚಿಕೆಯಾಗಬೇಕಾದ ಮನೆಗಳು ತಯಾರಿ ಆಗಿದ್ದರೂ ಹಂಚಿಕೆ ಮಾಡದೇ ಫಲಾನುಭವಿಗಳನ್ನು ಬಿಟ್ಟು ಬೇರೆಯವರಿಗೆ ಹಂಚುವ ಉದ್ದೇಶದಿಂದ ವಿಳಂಬ ಮಾಡುತ್ತಿರುವ ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿ ವಿರುದ್ಧ ಹಾಗೂ ಸ್ಥಳೀಯ ಶಾಸಕ ಅರವಿಂದ ಬೆಲ್ಲದ ನಿರ್ಲಕ್ಷ್ಯ ಧೋರಣೆಯನ್ನು ತೀವ್ರವಾಗಿ ಖಂಡಿಸಿದರು‌.
ಅವರ ವರ್ತನೆಯಿಂದ ಬೇಸತ್ತು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಹುಬ್ಬಳ್ಳಿ ಧಾರವಾಡ ವಸತಿ ರಹಿತ ಜನ ಹಾಗೂ ಫಲಾನುಭವಿಗಳ ವತಿಯಿಂದ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು
ಹು-ಧಾ ಮಹಾನಗರ
ಜಿಲ್ಲಾ ಜನತಾದಳ ಜ್ಯಾತ್ಯಾತೀತ ಅಧ್ಯಕ್ಷ ಗುರುರಾಜ ಹುಣಸಿಮರದ ವಿವರಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *