ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಜೆಡಿಎಸ್ ನಿಂದ ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿ ಕಚೇರಿಗೆ ಮುತ್ತಿಗೆ
ಧಾರವಾಡ prajakiran.com :
ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಜನತಾದಳ(ಜ್ಯಾತ್ಯಾತೀತ) ವತಿಯಿಂದ ಕರ್ನಾಟಕ ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿ ಕಚೇರಿಗೆ ಡಿ. 22 ರಂದು ಬುಧವಾರ 11 ಗಂಟೆಗೆ ಮುತ್ತಿಗೆ ಹಾಕುವ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಾನಗರ ಜಿಲ್ಲೆಯ ಜೆಡಿಎಸ್ ಅಧ್ಯಕ್ಷ ಗುರುರಾಜ ಹುಣಸಿಮರದ ತಿಳಿಸಿದ್ದಾರೆ.
ಅವರು ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕಳೆದ 7 ವರ್ಷಗಳಿಂದ ಹು-ಧಾ ಮಹಾನಗರದಲ್ಲಿ ಬಡಜನರಿಗೆ ಹಂಚಿಕೆಯಾಗಬೇಕಾದ ಮನೆಗಳು ತಯಾರಿ ಆಗಿದ್ದರೂ ಹಂಚಿಕೆ ಮಾಡದೇ ಫಲಾನುಭವಿಗಳನ್ನು ಬಿಟ್ಟು ಬೇರೆಯವರಿಗೆ ಹಂಚುವ ಉದ್ದೇಶದಿಂದ ವಿಳಂಬ ಮಾಡುತ್ತಿರುವ ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿ ವಿರುದ್ಧ ಹಾಗೂ ಸ್ಥಳೀಯ ಶಾಸಕ ಅರವಿಂದ ಬೆಲ್ಲದ ನಿರ್ಲಕ್ಷ್ಯ ಧೋರಣೆಯನ್ನು ತೀವ್ರವಾಗಿ ಖಂಡಿಸಿದರು.
ಅವರ ವರ್ತನೆಯಿಂದ ಬೇಸತ್ತು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಹುಬ್ಬಳ್ಳಿ ಧಾರವಾಡ ವಸತಿ ರಹಿತ ಜನ ಹಾಗೂ ಫಲಾನುಭವಿಗಳ ವತಿಯಿಂದ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು
ಹು-ಧಾ ಮಹಾನಗರ
ಜಿಲ್ಲಾ ಜನತಾದಳ ಜ್ಯಾತ್ಯಾತೀತ ಅಧ್ಯಕ್ಷ ಗುರುರಾಜ ಹುಣಸಿಮರದ ವಿವರಿಸಿದರು.