ಏಟಿಗೆ ಎದುರೇಟು ಕೊಟ್ಟ ಸುಮಲತಾ
ಬೆಂಗಳೂರು prajakiran.com : ಅಂಬರೀಶ್ ಕುಟುಂಬದ ಬಗ್ಗೆ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಕೆಟ್ಟದಾಗಿ ಮಾತನಾಡಿದ ವಿಚಾರವಾಗಿ ವಾಗ್ದಾಳಿ ನಡೆಸಿದ್ದ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ನಿವಾಸಕ್ಕೆ ಜೆಡಿಎಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿರುವ ರಾಕ್ ಲೈನ್ ವೆಂಕಟೇಶ್ ನಿವಾಸದ ಎದುರು ಇಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ರಾಕ್ಲೈನ್ ವೆಂಕಟೇಶ್ ಗೂ, ಮಂಡ್ಯಕ್ಕೂ ಏನೂ ಸಂಬಂಧ?
ವೆಂಕಟೇಶ್ ಕುಮಾರಸ್ವಾಮಿ ಅವರಲ್ಲಿ ಕ್ಷಮೆ ಕೇಳಬೇಕು ಎಂದು ವೆಂಕಟೇಶ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ತೀವ್ರತೆಯನ್ನು ಅರಿತ ಪೊಲೀಸರು ವೆಂಕಟೇಶ್ ನಿವಾಸದ ಬಳಿ ಬ್ಯಾರಿಕೇಡ್ ಅಳವಡಿಸಿದ್ದರು.
ಬ್ಯಾರಿಕೇಡ್ ತಳ್ಳಿಕೊಂಡು ಕೆಲವರು ಮನೆಯೊಳಗೆ ನುಗ್ಗಲು ಯತ್ನಿಸಿದರು. ಹಲವು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇನ್ನೂ ಈ ಕುರಿತು ಮಾದ್ಯಮದವರೊಂದಿಗೆ ಮಾತನಾಡಿದ ರಾಕ್ಲೈನ್ ವೆಂಕಟೇಶ್, ನಾನು ಕ್ಷಮೆ ಕಳುವಂತಹ ತಪ್ಪು ಏನು ಮಾತಡಿದ್ದೇನೆ?
ಚಿತ್ರರಂಗದವರ ಬಗ್ಗೆ ಅವರು ಮಾತನಾಡಿದ್ದರಿಂದ ನಾನು ಅದರ ಬಗ್ಗೆ ಮಾತನಾಡಿದ್ದೇನೆ ಹೊರತು ಅವರ ರಾಜಕೀಯ ಬಗ್ಗೆ ಮಾತನಾಡಿಲ್ಲ. ಕೆಟ್ಟ ಪದಗಳನ್ನು ಬಳಸಿಲ್ಲ. ನಾನು ಕ್ಷಮೆ ಕೇಳುವುದಿಲ್ಲ ಎಂದು ಹೇಳಿದ್ದಾರೆ.
ಈ ಹಿನ್ನೆಲೆ ಸಂಸದೆ ಸುಮಲತಾ ಟ್ವಿಟ್ ಮಾಡಿದ್ದು, ಸತ್ಯದ ಪರವಾಗಿ ನಿಂತಾಗ ಶತ್ರುಗಳು ಹುಟ್ಟಿಕೊಳ್ಳುತ್ತಾರೆ.
ಕೆಲವರು ಮಹಿಳೆಯರು ಅಧಿಕಾರದಲ್ಲಿರುವುದನ್ನು ಸಹಿಸುವುದಿಲ್ಲ. ಭ್ರಷ್ಟರು, ನಿಷ್ಟಾವಂತ ಅಧಿಕಾರಿಗಳನ್ನು ವರ್ಗಾವಣೆ, ಒತ್ತಡ ಕಿರುಕುಳ ನೀಡುತ್ತಾರೆ.
ಪಾಪ ಸಂಸದರನ್ನು ವರ್ಗಾವಣೆ ಮಾಡಲು ಆಗುವುದುಲ್ಲ ಎಂದು ಪರೋಕ್ಷವಾಗಿ ಎಚ್ಡಿಕೆ ಅವರಿಗೆ ಟಾಂಗ್ ಕೊಟ್ಟಿದ್ದಾರೆ.