ಹುಬ್ಬಳ್ಳಿ prajakiran.com : ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಸವರಾಜ ಗುರಿಕಾರ ಅವರಿಗೆ ಜೆಡಿಎಸ್ ಬೆಂಬಲಿಸಲಿದೆ ಎಂದು ವಿಧಾನ ಪರಿಷತ್ ಹಿರಿಯ ಸದಸ್ಯ ಹಾಗೂ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಘೋಷಿಸಿದರು.
ಅವರು ಶುಕ್ರವಾರ
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಈ ವಿಷಯ ಪ್ರಕಟಿಸಿದರು.
ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ನಾಲ್ಕು ಜಿಲ್ಲೆಯ ಮತದಾರರನ್ನ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ ಎಂದರು.
ದೇವೆಗೌಡರು, ಕುಮಾರಸ್ವಾಮಿ ಸೂಚನೆ ಮೆರೆಗೆ ಜೆಡಿಎಸ್ ಅಭ್ಯರ್ಥಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ ಎಂದರು.
ಸ್ವತಂತ್ರ ಅಭ್ಯರ್ಥಿ ಗೆ ಬೆಂಬಲ ನೀಡಲು ನಿರ್ಧಾರ ಮಾಡಿದ್ದೇವೆ. ಈ ದಿಸೆಯಲ್ಲಿ ಪಕ್ಷೇತರ ಅಭ್ಯರ್ಥಿ ಬಸವರಾಜ್ ಗುರಿಕಾರ್ ಗೆ ಬೆಂಬಲ ಸೂಚನೆ ಮಾಡಿದ್ದೇವೆ ಎಂದರು.
ಪದವೀಧರ ಚುನಾವಣೆ ದಿನಾಂಕ ಪ್ರಕಟವಾದ ಮೇಲೆ ಮತದಾರರ ಭೇಟಿ ಮಾಡಲು ನಮಗೆ ಸಾಧ್ಯವಾಗಲಿಲ್ಲ.
ಕಾಂಗ್ರೆಸ್ , ಬಿಜೆಪಿ ಯಿಂದ ಅಂತರ ಕಾಪಾಡಿಕೊಳ್ಳಲು, ಪಕ್ಷೇತರ ಅಭ್ಯರ್ಥಿ ಗೆ ಬೆಂಬಲ ನೀಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಇದರಿಂದ ಪಕ್ಷಕ್ಕೆ ಯಾವುದೇ ರೀತಿಯ ಹಾನಿ ಆಗುವುದಿಲ್ಲ ಎಂದು ತಿಳಿಸಿದರು.
ಇದೇ ವೇಳೆ ನಾನು ಎಂದಿಗೂ ಪಕ್ಷ ದ್ರೋಹ ಮಾಡಿಲ್ಲ. ಬಸವರಾಜ ಹೊರಟ್ಟಿ ಹಾಗೂ ಪಕ್ಷ ತೆಗೆದುಕೊಂಡ ನಿರ್ಧಾರಕ್ಕೆ ಬದ್ದನಾಗಿರುವೆ.
ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುವೆ ಎಂದು ಕಣದಿಂದ ಹಿಂದೆ ಸರಿದ ಜೆಡಿಎಸ್ ಅಭ್ಯರ್ಥಿ ಶಿವಶಂಕರ ಕಲ್ಲೂರ, ಹೇಳಿದರು.
ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಮಾತನಾಡಿ,
ಜೆಡಿಎಸ್ ನಿಂದ ಬೆಂಬಲ ಸಿಕ್ಕಿದಕ್ಕೆ ದೇವೆಗೌಡರು ಹಾಗೂ ಕುಮಾರಸ್ವಾಮಿ ಅವರಿಗೆ ಅಭಿನಂದನೆಗಳು.
ಜೆಡಿಎಸ್ ಬೆಂಬಲದಿಂದ ನನಗೆ ಆನೆ ಬಲ ಬಂದಿದೆ. ಮತದಾರರಿಂದ ಉತ್ತಮ ಬೆಂಬಲ ವ್ಯಕ್ತವಾಗಿದೆ. ಈ ಬಾರಿಯ ಪಶ್ಚಿಮ ಪದವೀಧರ ಚುನಾವಣೆಯಲ್ಲಿ ನನ್ನ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.