ನವದೆಹಲಿ prajakiran.com : ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ಸೇರಿದಂತೆ ಇತರೆ ಪ್ರಮುಖ ವಿಚಾರಗಳ ಬಗ್ಗೆ ಜೂನ್. 24 ರಂದು ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷ ಸಭೆ ನಡೆಸಲಿದ್ದಾರೆ.
ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ, ಜಮ್ಮು ಕಾಶ್ಮೀರದ ನಾಯಕರ ಜೊತೆಗೆ ನಡೆಸುತ್ತಿರುವ ಮೊದಲ ಸಭೆಯಾಗಿದೆ.
ನಿನ್ನೆ ಗೃಹ ಸಚಿವ ಅಮಿತ್ ಶಾ ಅವರು, ರಾಷ್ಟ್ರೀಯಾ ಭದ್ರತಾ ಸಲಹೆಗಾರ ಅಜಿತ್ ದೋವಲ್, ಜಮ್ಮು ಕಾಶ್ಮೀರದ ಲೆ. ಗವರ್ನರ್ ಮನೋಜ್ ಸಿನ್ಹಾ ಸೇರಿದಂತೆ ಇತರೆ ಉನ್ನತ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.
ಈ ಸಭೆಯತ್ತ ವಿಪಕ್ಷಗಳ ಕಣ್ಣು ನೆಟ್ಟಿದ್ದು, ದೇಶದ ಜನತೆ ಕುತೂಹಲ ದಿಂದ ನೋಡುವಂತಾಗಿದೆ.