ವಿಜಯಪುರ prajakiran.com :
75 ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ದ್ವಜಾರೋಹಣ ನೆರವೇರಿಸಲು ಆಗಮಿಸಿದಾಗ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿದರು.
ಈ ವೇಳೆಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ದ್ವಜಾರೋಹಣ ಮಾಡದಂತೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಇದರಿಂದ ಕೆಲಕಾಲ ಪರಿಸ್ಥಿತಿ ಬಿಗಡಾಯಿಸಿತು. ಪೊಲೀಸರು ಮನವೊಲಿಸಲು ಯತ್ನಿಸಿದರು ಪ್ರಯೋಜನವಾಗದ್ದರಿಂದ ಅವರನ್ನು ವಶಕ್ಕೆ ತೆಗೆದುಕೊಂಡು ಆನಂತರ ಬಿಡುಗಡೆ ಮಾಡಲಾಯಿತು.
ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತರು ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸಚಿವರು ಬಸವಣ್ಣನ ನಾಡಿನಲ್ಲಿ ದ್ವಜಾರೋಹಣ ಮಾಡದಂತೆ ಪಟ್ಟು ಹಿಡಿದರು.
ಬಳಿಕ ಪೊಲೀಸ್ ಬಂದೋಬಸ್ತ್ ನಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಧ್ವಜಾರೋಹಣ ನೆರವೇರಿಸಿದರು.
ಆದರೆ ಅವರು ಇದರಿಂದಾಗಿ ತೀವ್ರ ಮುಜುಗರ ಅನುಭವಿಸಿದ್ದು ಸುಳ್ಳಲ್ಲ.