ಅಂತಾರಾಷ್ಟ್ರೀಯ

ರಾಹುಲ್ ಗಾಂಧಿ ಅಪ್ರಬುದ್ಧ ರಾಜಕಾರಣಿ : ಜೋಶಿ

ಹುಬ್ಬಳ್ಳಿ ಪ್ರಜಾಕಿರಣ.ಕಾಮ್ : ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಅಪಶಕುನ ಎಂದ ರಾಹುಲ್ ಗಾಂಧಿ ಅಪ್ರಬುದ್ಧ ರಾಜಕಾರಣಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಕಿಡಿಕಾರಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಮಾದ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವರು, ರಾಹುಲ್ ಗಾಂಧಿಯ ಇಂತಹ ಹೇಳಿಕೆಗಳ ಕಾರಣದಿಂದಲೇ ಕಾಂಗ್ರೆಸ್ ಕಳೆದ ಎರಡೂ ಲೋಕಸಭಾ ಚುನಾವಣೆಗಳಲ್ಲೂ ಅಧಿಕೃತ ವಿರೋಧ ಪಕ್ಷದ ಮಾನ್ಯತೆಯನ್ನೂ ಪಡೆಯಲಾಗದಷ್ಟು ಹೀನಾಯವಾಗಿ ಸೋತಿದೆ.

ನರೇಂದ್ರ ಮೋದಿಯವರನ್ನು ಇಡೀ ಭಾರತ ದೇಶವಷ್ಟೇ ಅಲ್ಲ, ವಿಶ್ವವೇ ಮೆಚ್ಚಿಕೊಂಡಿದೆ. ಹೀಗಿರುವಾಗ ರಾಹುಲ್ ಗಾಂಧಿಯ ಇಂತಹ ಲಘು ಮಾತುಗಳು ಪ್ರತಿಕ್ರಿಯೆ ನೀಡುವುದಕ್ಕೂ ಅರ್ಹವಲ್ಲ. ರಾಹುಲ್ ಗಾಂಧಿ ಇಂತಹ ಅಪ್ರಬುದ್ಧ ಹೇಳಿಕೆಗಳಿಗೇ ಹೆಸರುವಾಸಿ. ಯಾರೋ ಬರೆದುಕೊಟ್ಟಿದ್ದನ್ನ ಓದುವ ರಾಹುಲ್ ಗಾಂಧಿಗೆ ಕನಿಷ್ಠ ಪಕ್ಷ ಆ ಬರೆದುಕೊಡಲಿಕ್ಕಾದರೂ ಪ್ರಬುದ್ಧರನ್ನ ನೇಮಿಸಿಕೊಳ್ಳಲಿ. ಇಲ್ಲದಿದ್ದರೆ ರಾಜಕೀಯದ ಘನತೆ ಗೌರವ ಕಾಪಾಡುವುದು ಕಾಂಗ್ರೆಸ್ ಕೈಯಲ್ಲಿ ಸಾಧ್ಯವಿಲ್ಲ. ಇದು ರಾಹುಲ್ ಅವರ ನಡತೆ ಮತ್ತು ಮಾತುಗಳಿಂದಲೇ ತಿಳಿಯುತ್ತಿದೆ. ತಮ್ಮ ನಾಯಕನಂತೆ, ಇತರ ಕಾಂಗ್ರೆಸ್ಸಿಗರೂ ತಮ್ಮ ಭಾಷೆ ಮತ್ತು ನಡವಳಿಕೆಯಲ್ಲಿ ತಮ್ಮ ಪಕ್ಷದ ಘನತೆ ಉಳಿದಿಲ್ಲ ಎಂದು ಸಾಬೀತು ಮಾಡುತ್ತಿದ್ದಾರೆ.

ದೇಶದ ಪ್ರಧಾನಮಂತ್ರಿಗಳ ಬಗ್ಗೆ ಲಘುವಾಗಿ ಮಾತನಾಡಿದ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ಈ ಕೂಡಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರಲ್ಲಿ ಕ್ಷಮೆ ಯಾಚಿಸಬೇಕು ಎಂದು ಕೇಂದ್ರ ಸಚಿವರ ಪ್ರಲ್ಹಾದ ಜೋಶಿ ಒತ್ತಾಯಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *