ರಾಜ್ಯ

ಹೈಕೋರ್ಟ್ ಆದೇಶ ರಾಜ್ಯ ಸರ್ಕಾರ ಪಾಲಿಸಲಿ : ಜೋಶಿ

ಧಾರವಾಡ ಪ್ರಜಾಕಿರಣ.ಕಾಮ್ : ಹುಬ್ಬಳ್ಳಿಯ ಚೆನ್ನಮ್ಮ ಮೈದಾನದಲ್ಲಿ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಪಾಲಿಕೆ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿ ಅಂಜುಮನ್ -ಏ- ಇಸ್ಲಾಂ ಸಂಸ್ಥೆ ಧಾರವಾಡ ಹೈಕೋರ್ಟ್‌ ಪೀಠಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನಾದರೂ ವಿಳಂಬ ಧೋರಣೆ ಕೈಬಿಟ್ಟು ಜಿಲ್ಲಾಡಳಿತದ ಮೂಲಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಲ್ಹಾದ ಜೋಶಿ, “ಈಗಾಗಲೇ ಕಳೆದ ವರ್ಷ ನ್ಯಾಯಾಲಯದ ಅನುಮತಿಯಂತೆ ಗಣಪತಿ ಕೂರಿಸಿ ಅತ್ಯಂತ ಶಾಂತಿಯುತವಾಗಿ ಸಾರ್ವಜನಿಕ ಗಣೇಶೋತ್ಸವ ಆಚರಿಸಲಾಗಿತ್ತು.

ಆದರೆ ಈ ಬಾರಿ ರಾಜ್ಯ ಸರಕಾರ ಜಿಲ್ಲಾಡಳಿತದ ಮೂಲಕ ಚೆನ್ನಮ್ಮ ಮೈದಾನದಲ್ಲಿ ಗಣಪತಿ ಕೂರಿಸಲು ಅನುಮತಿ ನೀಡದೆ ಹಬ್ಬಕ್ಕೆ ಅಡ್ಡಿಪಡಿಸುತ್ತಿತ್ತು.

ಜೊತೆಗೆ ಚೆನ್ನಮ್ಮ ಮೈದಾನದಲ್ಲಿ ಗಣಪತಿ ಕೂರಿಸಲು ಪಾಲಿಕೆ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿದ್ದ ಅಂಜುಮನ್ -ಏ- ಇಸ್ಲಾಂ ಸಂಸ್ಥೆಯ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಹೀಗಾಗಿ ತಕ್ಷಣವೇ ರಾಜ್ಯ ಸರ್ಕಾರ ಜಿಲ್ಲಾಡಳಿತಕ್ಕೆ ಸೂಚನೆ ನೀಡುವ ಮೂಲಕ ಚೆನ್ನಮ್ಮ ಮೈದಾನದಲ್ಲಿ ಗಣೇಶನ ಕೂರಿಸಲು ಅನುಮತಿ ನೀಡಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ.

“ರಾಜ್ಯ ಸರ್ಕಾರ ಇನ್ನು ಯಾವುದೇ ಗೊಂದಲಕ್ಕೆ ಅವಕಾಶ ನೀಡದಂತೆ ತಕ್ಷಣ ಜಿಲ್ಲಾಡಳಿತಕ್ಕೆ ಸೂಚಿಸಿ ರಾಣಿ ಚೆನ್ನಮ್ಮ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕು..” ಎಂದು ಧಾರವಾಡದ ಸಂಸದ, ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಒತ್ತಾಯಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *