ಜನಜಾಗೃತಿ ಸಂಘದ ವತಿಯಿಂದ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರಿಗೆ ಹೃದಯಸ್ಪರ್ಶಿ ಸನ್ಮಾನ
ಧಾರವಾಡದ ಎನ್.ಎ. ಮುತ್ತಣ್ಣ ಸ್ಮಾರಕ ಪೋಲಿಸ್ ಮಕ್ಕಳ ವಸತಿ ಶಾಲೆ ಪುನರ್ ನಿರ್ಮಾಣಕ್ಕೆ 2 ಕೋಟಿ ಮಂಜೂರು ಹಿನ್ನೆಲೆ
ಜನಜಾಗೃತಿ ಸಂಘಕ್ಕೆ ಹಲವು ನಿವೃತ್ತ ಪೊಲೀಸರು, ಶಾಲೆಯ ಹಳೆಯ ವಿದ್ಯಾರ್ಥಿಗಳು, ಕೆ ಎಚ್ ಬಿ ಬಡಾವಣೆ ಹಿರಿಯರ ಸಾಥ್
ಧಾರವಾಡ ಪ್ರಜಾಕಿರಣ. ಕಾಮ್ : ರಾಜ್ಯದ ಏಕೈಕ ಪೊಲೀಸ್ ಮಕ್ಕಳ ವಸತಿ ಶಾಲೆ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯ ಪುನರುತ್ಥಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ತಮ್ಮ ಗಣಿ ಮತ್ತು ಕಲ್ಲಿದ್ದಲು ಖಾತೆ ಅಧೀನದಲ್ಲಿ ಬರುವ ಕೋಲ್ ಇಂಡಿಯಾ ಕಂಪನಿಯ ಸಾಮಾಜಿಕ ಜವಾಬ್ದಾರಿ ಅಡಿ 2 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಿಸಿರುವುದಕ್ಕೆ ಜನಜಾಗೃತಿ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಮಂಗಳವಾರ ಬೆಳಗ್ಗೆ ಹುಬ್ಬಳ್ಳಿಯ ಅವರ ನಿವಾಸಕ್ಕೆ ತೆರಳಿದ
ಜನಜಾಗೃತಿ ಸಂಘದ ಅಧ್ಯಕ್ಷರಾದ ಬಸವರಾಜ ಕೊರವರ ಹಾಗೂ ನಾಗರಾಜ ಕಿರಣಗಿ ನೇತೃತ್ವದಲ್ಲಿ ಕೆ ಹೆಚ್ ಬಿ ಬಡಾವಣೆಯ ಹಿರಿಯ ನಾಗರಿಕರು ಹಾಗೂ ಪೊಲೀಸ್ ಮಕ್ಕಳ ವಸತಿ ಶಾಲೆ ಹಳೆಯ ವಿದ್ಯಾರ್ಥಿಗಳು ಹಾಗೂ ನಿವೃತ್ತ ಪೊಲೀಸ್ ಸಿಬ್ಬಂದಿ
ಹೃದಯಸ್ಪರ್ಶಿಯಾಗಿ ಸನ್ಮಾನಿಸಿ ಗೌರವಿಸಿದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರಿಗೆ ರಾಜ್ಯದ ಪೊಲೀಸ್ ಸಿಬ್ಬಂದಿ ವರ್ಗ ಹಾಗೂ ಕುಟುಂಬ ಸದಸ್ಯರ ಪರವಾಗಿ, ಧಾರವಾಡ ಜಿಲ್ಲೆಯ ಜನತೆ ಪರವಾಗಿ ತುಂಬು ಹೃದಯದಿಂದ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶಿವಾನಂದ ಜೋಡಳ್ಳಿ, ರಾಜೇಶ ಶಿಂಧೆ, ಮಹಾಲಿಂಗ ಕಮತಗಿ, ಡಾಕ್ಟರ್ ಪ್ರಶಾಂತ ಲೇಸಯ್ಯನವರಮಠ, ಪ್ರಶಾಂತ, ಅಮೃತಯ್ಯ, ಗಿರಿಧರ ಕುಲಕರ್ಣಿ ಹಾಗೂ ಜಿ.ಜೆ. ಜೋಶಿ, ಶಿವಾನಂದ ಹಲಸಗಿ, ರಾಹುಲ್ ಕಾಂಬಳೆ ಸೇರಿದಂತೆ ಕೆಎಚ್ ಬಿ ಕಾಲೋನಿಯ ಹಿರಿಯ ನಾಗರಿಕರು ಉಪಸ್ಥಿತರಿದ್ದರು.