ಹುಬ್ಬಳ್ಳಿ prajakiran.com : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೋವಿಡ್ ಸಮಯದಲ್ಲಿ ಸಮರ್ಥವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ಹೀಗಾಗಿ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆ ಹೈಕಮಾಂಡ್ ಮುಂದೆ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಅವರು ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ಕುರಿತು ಸ್ಪಷ್ಟ ಪಡಿಸಿದರು.
ಕಳೆದ ಕೆಲ ದಿನಗಳಿಂದ ಮಾಧ್ಯಮಗಳಲ್ಲಿ
ನಾಯಕತ್ವ ಬದಲಾವಣೆ ವಿಚಾರ ಪದೇ ಪದೆ ಚರ್ಚೆಗೆ ಬರುತ್ತಿದೆ.
ಹೀಗಾಗಿ ಸಿಎಂ ಅವರು ಹೈ ಕಮಾಂಡ್ ಬಯಸಿದರೆ ರಾಜೀನಾಮೆ ಎಂದು ಹೇಳಿರಬಹುದು.
ಆದರೆ ಅವರಿಂದ ರಾಜೀನಾಮೆ ಕೊಡಿಸುವ ಯಾವ ಪ್ರಶ್ನೆಯೂ ಪಕ್ಷದ ಮುಂದಿಲ್ಲ ಎಂದು ಹೇಳಿದರು.
ಕೋವಿಡ್ ಸಂಕಷ್ಟದ ಕಾಲದಲ್ಲಿ, ಈ ವಯಸ್ಸಿನಲ್ಲೂ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಮರ್ಥರಿದ್ದಾರೆ.
ಕ್ರಿಯಾಶೀಲತೆಯಿಂದ ಕೆಲಸ ಮಾಡುತ್ತಿರುವ ಅವರನ್ನು ಬದಲಾವಣೆ ಮಾಡುವ ಯಾವುದೇ ವಿಚಾರವಿಲ್ಲ.
ಈ ಬಗ್ಗೆ ಹೈಕಮಾಂಡ್ನಿಂದಲೂ ಯಾವುದೇ ರೀತಿಯ ಸೂಚನೆ ಅವರಿಗಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿವರಿಸಿದರು.