ಧಾರವಾಡ prajakiran.com : ಧಾರವಾಡ ಕೃಷಿ ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮಕ್ಕೆ ಭದ್ರತೆ ಬಂದೋಬಸ್ತ್ ಗಾಗಿ ನಿಯೋಜಿಸಿದ
ಪೊಲೀಸ್ ಪೇದೆ ಒಬ್ಬ ಖಾಸಗಿ ವಾಹಿನಿ ಕ್ಯಾಮೆರಾ ಮನ್ ಮೇಲೆ ಹಲ್ಲೆ ನಡೆಸಿದ ಘಟನೆ ಮಂಗಳವಾರ ನಡೆದಿದೆ.
ತಕ್ಷಣ ಘಟನೆ ಖಂಡಿಸಿ ಕೃಷಿ ವಿವಿ
ವಿ ಸಿ ಮನೆ ಎದುರು ಪ್ರತಿಭಟನೆ ನಡೆಸಿದ
ಮಾಧ್ಯಮ ಪ್ರತಿನಿಧಿಗಳು ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸ್ ಅಧಿಕಾರಿ ವರ್ಗದವರು ಕೆಳಹಂತದ ಸಿಬ್ಬಂದಿಯ ವರ್ತನೆ ತಿದ್ದಬೇಕು.
ಸಾಧ್ಯವಾದರೆ ಅವರಿಗೆ ತರಬೇತಿಯನ್ನು ನೀಡುವ ಮೂಲಕ ಅವ್ಯವಸ್ಥೆ ಸರಿಪಡಿಸಲು ಪ್ರಯತ್ನಿಸಬೇಕು ಎಂದು ಹಿರಿಯ ಪತ್ರಕರ್ತ ಬಸವರಾಜ ಹೊಂಗಲ್ ಹೇಳಿದರು.
ಹುಬ್ಬಳ್ಳಿಯ
ಬೆಂಡಿಗೇರಿ ಪೋಲಿಸ್ ಠಾಣೆಯ ಪೇದೆ ಬಸವರಾಜ ಸಿಂಗನ್ನವರ ಹಲ್ಲೆ ನಡೆಸಿ, ನಿಂದಿಸಿದ್ದಾನೆ ಎಂದು ದೂರಿದರು.
ಅಲ್ಲದೆ, ತಕ್ಷಣ ಅವರ ವಿರುದ್ಧ ಕ್ರಮ ಜರುಗಿಸದಿದ್ದಲ್ಲಿ ಹೋರಾಟದ ದಾರಿ ತುಳಿಯುವುದಾಗಿ ಎಚ್ಚರಿಸಿದರು.
ಮಾಹಿತಿಯನ್ನು ಅರಿತು ಘಟನಾ ಸ್ಥಳಕ್ಕೆ ದೌಡಾಯಿಸಿದ ಕೃಷಿ ಸಚಿವ ಬಿ.ಸಿ. ಪಾಟೀಲ, ಪೊಲೀಸ್ ಪೇದೆಗೆ ಕಾರಣ ಕೇಳಿ ನೋಟಿಸ್ ನೀಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.