ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನವಾಗಿ ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಕಾಲ ಕಳೆಯುತ್ತಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ತೀರ್ಪು ಕಾಯ್ದರಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಗುರುವಾರ ಹೈಕೋರ್ಟ್ ನ್ಯಾರ್ಯಮೂರ್ತಿ ಕೆ. ನಟರಾಜನ್ ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ.
ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಪರ ವಕೀಲ ಶಶಿಕಿರಣ ಶೆಟ್ಟಿ ಅವರು ವಾದ ಮಂಡಿಸಿ ಜಾಮೀನು ನೀಡುವಂತೆ ಮನವಿ ಮಾಡಿದ್ದರು.
ಅದಕ್ಕೆ ಪ್ರತಿಯಾಗಿ ಸಿಬಿಐ ಪರ ಸುಪ್ರೀಂ ಕೋರ್ಟ್ ಹೆಚ್ಚುವರಿ ಸಾಲಿಸೇಟರ್ ಜನರಲ್ ಎಸ್.ವಿ. ರಾಜು ಅವರು ಸುದೀರ್ಘವಾದ ಪ್ರತಿವಾದ ಮಂಡಿಸಿ,ಪ್ರಕರಣ ಇನ್ನೂ ವಿಚಾರಣೆ ಹಂತದಲ್ಲಿ ಇದೆ.
ಅವರ ವಿರುದ್ಧ ಸಾಕಷ್ಟು ಪ್ರಬಲ ಸಾಕ್ಷ್ಯಗಳಿದ್ದು, ಅನೇಕರು ನ್ಯಾಯಾಲಯ ಎದುರು 164 ಹೇಳಿಕೆ ನೀಡಿದ್ದಾರೆ ಎಂದು ವಾದ ಮಂಡಿಸಿ, ಗಮನ ಸೆಳೆದರು.
ಹೀಗಾಗಿ ವಾದ ಪ್ರತಿವಾದ ಆಲಿಸಿದ
ಹೈಕೋರ್ಟ್ ನ್ಯಾಯಮೂರ್ತಿ ಕೆ. ನಟರಾಜನ್ ಅವರು ತೀರ್ಪು ಕಾಯ್ದಿರಿಸಲಾಗಿದೆ ಎಂದು ಹೇಳಿದರು.
ಈ ಹಿಂದೆ ಧಾರವಾಡ ಹೈಕೋರ್ಟ್ ನ್ಯಾಯಮೂರ್ತಿಗಳಾಗಿದ್ದಾಗ ಕೆ. ನಟರಾಜನ್ ಅವರು ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದರು.
ಇದೀಗ ಸಿಬಿಐ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದ ಬಳಿಕ ಮತ್ತೆ ಅವರ ಎದುರು ಜಾಮೀನು ಅರ್ಜಿ ವಿಚಾರಣೆಗೆ ಬಂದಿರುವುದು ತೀವ್ರ ಕುತೂಹಲ ಕೆರಳಿಸಿದ್ದು ಜಾಮೀನು ನೀಡ್ತಾರಾ ಇಲ್ಲವೇ ಎಂಬುದನ್ನು ಬರುವ ದಿನಗಳಲ್ಲಿ ಕಾಯ್ದು ನೋಡಬೇಕಿದೆ.
ಈಗಾಗಲೇ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಧಾರವಾಡ ಜಿಲ್ಲೆಯ ಮೂರನೇ ಅಧಿಕ ಹಾಗೂ ಸಿಬಿಐ ವಿಶೇಷ ನ್ಯಾಯಾಲಯ, ಧಾರವಾಡ ಹೈಕೋರ್ಟ್ ಮತ್ತು ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.