ಧಾರವಾಡ prajakiran.com : ಧಾರವಾಡದ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಆರೋಪದ ಮೇಲೆ ಬಂಧಿತರಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಅವರ ಸೋದರ ಮಾವ ಚಂದೂ ಮಾಮ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆಗೊಂಡಿದೆ.
ಸೋಮವಾರ ಡಿ. 28ಕ್ಕೆ ಇಬ್ಬರ
ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಮತ್ತೆ ಅವಧಿ ವಿಸ್ತರಿಸುವಂತೆ ಧಾರವಾಡದ ಮೂರನೇ ಅಧಿಕ ನ್ಯಾಯಾಲಯ ಹಾಗೂ ವಿಶೇಷ ಸಿಬಿಐ
ನ್ಯಾಯಾಲಯದ ಎದುರು ಅವರ ಪರ ವಕೀಲರು ಮನವಿ ಮಾಡಿದರು.
ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಲಯದ ನ್ಯಾಯಾಧೀಶರು ನ್ಯಾಯಾಂಗ ಬಂಧನದ ಅವಧಿಯನ್ನು ಜ.8ರವರೆಗೂ ವಿಸ್ತರಣೆ ಮಾಡಿ ಆದೇಶ ಹೊರಡಿಸಿದರು.
ಈಗಾಗಲೇ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ಹೈಕೋರ್ಟ್ ಮೆಟ್ಟಿಲು ಹತ್ತಿದ್ದು, ಅಲ್ಲಿಯ ವಿಚಾರಣೆ ಯತ್ತ ಎಲ್ಲರ ಚಿತ್ತ ನೆಟ್ಟಿದೆ.