ರಾಜ್ಯ

ಮಾಜಿ ಸಚಿವ ವಿನಯ್ ಕುಲಕರ್ಣಿ, ಸೋದರ ಮಾವ ಚಂದೂ ಮಾಮ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

ಧಾರವಾಡ prajakiran.com : ಧಾರವಾಡದ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಆರೋಪದ ಮೇಲೆ ಬಂಧಿತರಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಅವರ ಸೋದರ ಮಾವ ಚಂದೂ ಮಾಮ ನ್ಯಾಯಾಂಗ ಬಂಧನ ಅವಧಿ ಮತ್ತೆ‌‌ ವಿಸ್ತರಣೆಗೊಂಡಿದೆ.

ಸೋಮವಾರ ಡಿ. 28ಕ್ಕೆ ಇಬ್ಬರ
ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಮತ್ತೆ ಅವಧಿ ವಿಸ್ತರಿಸುವಂತೆ ಧಾರವಾಡದ ಮೂರನೇ ಅಧಿಕ ನ್ಯಾಯಾಲಯ ಹಾಗೂ ವಿಶೇಷ ಸಿಬಿಐ
ನ್ಯಾಯಾಲಯದ ಎದುರು ಅವರ ಪರ ವಕೀಲರು ಮನವಿ ಮಾಡಿದರು.

ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಲಯದ ನ್ಯಾಯಾಧೀಶರು ನ್ಯಾಯಾಂಗ ಬಂಧನದ ಅವಧಿಯನ್ನು ಜ.8ರವರೆಗೂ ವಿಸ್ತರಣೆ ಮಾಡಿ ಆದೇಶ ಹೊರಡಿಸಿದರು.

ಈಗಾಗಲೇ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ಹೈಕೋರ್ಟ್ ಮೆಟ್ಟಿಲು ಹತ್ತಿದ್ದು, ಅಲ್ಲಿಯ ವಿಚಾರಣೆ ಯತ್ತ ಎಲ್ಲರ ಚಿತ್ತ ನೆಟ್ಟಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *