ಅಂತಾರಾಷ್ಟ್ರೀಯ

ಮಾಜಿ ಸಚಿವ ವಿನಯ ಕುಲಕರ್ಣಿ ಭೇಟಿಗೆ ಅವಕಾಶ ನೀಡಿ ಎಂದು ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ : ಜೈಲು ಅಧಿಕಾರಿಗೆ ವರದಿ ನೀಡಲು ಕೋರ್ಟ್ ಸೂಚನೆ

ಬೆಂಗಳೂರು prajakiran.com : ಧಾರವಾಡ ಜಿಪಂ ಸದಸ್ಯ ಯೋಗೀಶ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐ ನಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಭೇಟಿಗೆ ಅವಕಾಶ ನೀಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ 82 ನೇ ಹೆಚ್ಚುವರಿ ಸಿಟಿ ಸಿವಿಲ್ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಜೂನ್ 7 ಕ್ಕೆ ಮುಂದೂಡಿದೆ.

ಡಿ.ಕೆ. ಶಿವಕುಮಾರ ಅವರ ಪರ ವಕೀಲ ಮಂಜುನಾಥ ಎಂ.ಆರ್. ಅವರು ಇಮೇಲ್ ಮೂಲಕ ಸಲ್ಲಿಸಿದ್ದ ಈ ಅರ್ಜಿಯನ್ನು ಅವರಿಬ್ಬರ ಅನುಪಸ್ಥಿತಿಯಲ್ಲಿ
ವಿಚಾರಣೆ ನಡೆಸಿದ ನ್ಯಾಯಾಲಯವು ಮಾಜಿ ಸಚಿವ ವಿನಯ ಕುಲಕರ್ಣಿ ಯನ್ನು ಭೇಟಿಯಾಗಲು ಕಾನೂನು ತೊಡಕುಗಳೇನಾದರೂ ಇದೆಯಾ ಎಂಬುದರ ಕುರಿತು ಬೆಳಗಾವಿಯ ಹಿಂಡಲಗಾ ಜೈಲಿನ ಮುಖ್ಯ ಅಧೀಕ್ಷರಿಗೆ ವರದಿ ನೀಡಲು ನ್ಯಾಯಾಲಯ ಸೂಚನೆ ನೀಡಿದೆ.

ಈ ಹಿಂದೆ ಡಿ.ಕೆ. ಶಿವಕುಮಾರ್ ಮಾಜಿ ಸಚಿವ ವಿನಯ ಕುಲಕರ್ಣಿ ಭೇಟಿಯಾಗಲು ಮುಂದೆ ಬಂದಾಗ ನ್ಯಾಯಾಲಯದ ಪರವಾನಿಗೆ ಪಡೆಯುವಂತೆ ವಿನಯ ಕೋರಿದ್ದರು.

ಹೀಗಾಗಿ ನ್ಯಾಯಾಲಯದ ಮೆಟ್ಟಿಲು ಹತ್ತಲಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಜೈಲು ಅಧಿಕಾರಿಗಳ ವರದಿ ಬಳಿಕ
ಬೆಂಗಳೂರಿನ 82 ನೇ ಹೆಚ್ಚುವರಿ ಸಿಟಿ ಸಿವಿಲ್ ನ್ಯಾಯಾಲಯವು
ಅನುಮತಿ ನೀಡುತ್ತಾ ಇಲ್ಲವೇ ಎಂಬುದನ್ನು ಜೂನ್ 7 ರಂದು ತಿಳಿಯಲಿದೆ.

ಉತ್ತರ ಕರ್ನಾಟಕ ಭಾಗದ ಜನತೆ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರ ಚಿತ್ತ ಕೂಡ
ಈ ಅರ್ಜಿಯ ವಿಚಾರಣೆಯತ್ತ ನೆಟ್ಟಿದೆ‌ ಎಂಬುದನ್ನು ಇಲ್ಲಿ ಗಮನಿಸಬಹುದು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *