ಬೆಂಗಳೂರು prajakiran.com : ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಕಡಿಮೆಯಾಗದ ಕಾರಣ ಕೇಂದ್ರ ಸರ್ಕಾರ ಜೂನ್. 30ರ ವರೆಗೆ ಕಠಿಣ ಕ್ರಮ ಕೈಗೊಳ್ಳಿ ಎಂದು ಸೂಚಿಸಿದೆ. ಅಲ್ಲದೆ, ತಜ್ಞರು ಸಹ ಲಾಕ್ಡೌನ್ ವಿಸ್ತರಣೆ ಮಾಡುವಂತೆ ಹೇಳಿದ್ದಾರೆ.
ಈ ಬಗ್ಗೆ ಸಿಎಂ ಯಡಿಯೂರಪ್ಪ ಅವರು ಎಲ್ಲ ಸಚಿವರ ಅಭಿಪ್ರಾಯ ತಿಳಿಯಲು ಮುಂದಾಗಿದ್ದು, ಭಾಗಶಃ ಸಚಿವರು ಲಾಕ್ಡೌನ್ ಮುಂದುವರೆಸುವಂತೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ರಾಜ್ಯದಲ್ಲಿ ಬಹುತೇಕವಾಗಿ ಜೂನ್ 30ರ ವರೆಗೆ ಲಾಕ್ಡೌನ್ ಮುಂದುವರೆಯುವ ಸಾಧ್ಯತೆಗಳಿವೆ. ಈ ಕುರಿತು ಜೂನ್ 5ರಂದು ಲಾಕ್ಡೌನ್ ಬಗ್ಗೆ ಸ್ಪಷ್ಟ ಮಾಹಿತಿ ದೊರೆಯಲಿದೆ.