ಆಧ್ಯಾತ್ಮ

ಬೆಂಗಳೂರು ಪೊಲೀಸ್ ಆಯುಕ್ತರಾಗಿ ಕಮಲ್ ಪಂಥ್

ಬೆಂಗಳೂರು prajakiran.com : ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ರಾಜ್ಯದ ಬಿಜೆಪಿ ಸರಕಾರ ವರ್ಗಾವಣೆ ಮಾಡಿದೆ.

ಅವರ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿ ಕಮಲ್ ಪಂಥ್ ಅವರನ್ನು ನಿಯೋಜಿಸಿ ಆದೇಶ ಹೊರಡಿಸಿದೆ.

ಭಾಸ್ಕರ್ ರಾವ್ ಅವರನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಭಾಸ್ಕರ್ ರಾವ್ ಅವರನ್ನು ಕೋವಿಡ್ ಸಂದರ್ಭದಲ್ಲಿ ದಿಢೀರ್ ಆಗಿ ವರ್ಗಾವಣೆ ಆಗಿರುವುದು ಭಾರೀ ಅಚ್ಚರಿ ಹಾಗೂ ಕುತೂಹಲ ಕೆರಳಿಸಿದ್ದು, ಪರ ವಿರೋಧ ಚರ್ಚೆಗೆ ಅವಕಾಶ ಮಾಡಿಕೊಟ್ಟಿದೆ.

1990ರ ಐಪಿಎಸ್ ಬ್ಯಾಚ್ ನ ಅಧಿಕಾರಿಯಾಗಿರುವ ಕಮಲ್ ಪಂಥ್ ಅವರು ಸದ್ಯ ರಾಜ್ಯ ಗುಪ್ತದಳದ ಎಡಿಜಿಪಿಆಗಿದ್ದರು.  

ಗುಪ್ತದಳದ ಎಡಿಜಿಪಿ ಆಗಿ ಸಿಐಡಿಯಲ್ಲಿ ಬಿ. ದಯಾನಂದ್ ಅವರನ್ನು ವರ್ಗಾಯಿಸಲಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *