ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ಬಿಡುವಿಲ್ಲದೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ತುಪರಿಹಳ್ಳ ಸೇರಿದಂತೆ ಜಿಲ್ಲೆಯ ಬಹುತೇಕ
ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.
ಇದರಿಂದಾಗಿ ಅಂಬ್ಲಿಕೊಪ್ಪ- ಡೊಂಬರಿಕೊಪ್ಪ ಸೇತುವೆ ತುಂಬಿ ಹರಿಯುತ್ತಿದೆ ಎಂದು ಧಾರವಾಡ ಜಿಲ್ಲಾಡಳಿತ ತಿಳಿಸಿದೆ.
ಜೊತೆಗೆ ಅಳ್ನಾವರ ತಾಲೂಕಿನ ಕಂಬಾರಗಣವಿ ಗ್ರಾಮದ ಸಮೀಪದಲ್ಲಿನ ಸೇತುವೆ ಮೇಲೆ ಹೋಗುತ್ತಿದ್ದ ಹಲವಾರು ಜಾನುವಾರುಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ.
ನಿನ್ನೆ ಸಂಜೆ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯಲ್ಲಿ ಜಾನುವಾರುಗಳು ಮನೆಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ.
ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ ಜಾನುವಾರುಗಳು ತಮ್ಮ ಜೀವ ಉಳಿಸಿಕೊಳ್ಳಲು ಪರದಾಡಿದ ದೃಶ್ಯಗಳನ್ನ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಈ ಜಾನುವಾರುಗಳು ಕಂಬಾರಗಣವಿ ಗ್ರಾಮದ ರೈತರವು ಎಂದು ಗೊತ್ತಾಗಿದೆ.
ಅವುಗಳ ಹುಡುಕಾಟ ಮುಂದುವರೆದಿದ್ದು, ಅನ್ನದಾತರ ಕುಟುಂಬದ ಕಣ್ಣೀರು ಹಾಗೂ ಆಕ್ರಂದನ ಮುಗಿಲು ಮುಟ್ಟಿದೆ.