ರಾಜ್ಯ

ಧಾರವಾಡದ ಕಂಬಾರಗಣವಿ ಬಳಿ ನೀರಿನಲ್ಲಿ ಕೊಚ್ಚಿಕೊಂಡು ಹೋದ ಜಾನುವಾರುಗಳು….!

ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ಬಿಡುವಿಲ್ಲದೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ತುಪರಿಹಳ್ಳ ಸೇರಿದಂತೆ ಜಿಲ್ಲೆಯ ಬಹುತೇಕ
ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ‌.

ಇದರಿಂದಾಗಿ ಅಂಬ್ಲಿಕೊಪ್ಪ- ಡೊಂಬರಿಕೊಪ್ಪ ಸೇತುವೆ ತುಂಬಿ ಹರಿಯುತ್ತಿದೆ ಎಂದು ಧಾರವಾಡ ಜಿಲ್ಲಾಡಳಿತ ತಿಳಿಸಿದೆ.

ಜೊತೆಗೆ ಅಳ್ನಾವರ ತಾಲೂಕಿನ ಕಂಬಾರಗಣವಿ ಗ್ರಾಮದ ಸಮೀಪದಲ್ಲಿನ ಸೇತುವೆ ಮೇಲೆ ಹೋಗುತ್ತಿದ್ದ ಹಲವಾರು ಜಾನುವಾರುಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ.

ನಿನ್ನೆ ಸಂಜೆ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯಲ್ಲಿ ಜಾನುವಾರುಗಳು ಮನೆಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ.

ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ  ಜಾನುವಾರುಗಳು ತಮ್ಮ ಜೀವ ಉಳಿಸಿಕೊಳ್ಳಲು ಪರದಾಡಿದ ದೃಶ್ಯಗಳನ್ನ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಈ ಜಾನುವಾರುಗಳು ಕಂಬಾರಗಣವಿ ಗ್ರಾಮದ ರೈತರವು ಎಂದು ಗೊತ್ತಾಗಿದೆ.

ಅವುಗಳ ಹುಡುಕಾಟ ಮುಂದುವರೆದಿದ್ದು, ಅನ್ನದಾತರ ಕುಟುಂಬದ ಕಣ್ಣೀರು ಹಾಗೂ ಆಕ್ರಂದನ ಮುಗಿಲು ಮುಟ್ಟಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *