ಬೆಂಗಳೂರು prajakiran.com : ರಾಜ್ಯದಲ್ಲಿ ಶುಕ್ರವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 10 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 11,005 ಕ್ಕೆ ಏರಿಕೆಯಾಗಿದೆ.
445 ಸೋಂಕಿತರಲ್ಲಿ, 65 ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದಾರೆ. 21 ಜನಅಂತರ್ ರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ.
ಇಂದು ರಾಜ್ಯದಲ್ಲಿ 246 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 6916 ಜನ ಗುಣಮುಖರಾಗಿದ್ದು, 3905 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 178 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಶುಕ್ರವಾರವೂ 10 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 180ಕ್ಕೆ ಏರಿಕೆಯಾದಂತಾಗಿದೆ.
ಶುಕ್ರವಾರ ಪತ್ತೆಯಾದ 445 ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.
ನಿನ್ನೇ 113 ಸೋಂಕಿತರನ್ನು ಕಂಡಿದ್ದ ಬೆಂಗಳೂರು ಇಂದು 144 ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ಬಳ್ಳಾರಿ 47, ಕಲಬುರಗಿ 42, ಕೊಪ್ಪಳ 36, ದಕ್ಷಿಣ ಕನ್ನಡ 33, ಧಾರವಾಡ 30, ರಾಯಚೂರು 14, ಗದಗ 12, ಚಾಮರಾಜನಗರ 11, ಉಡುಪಿ 9, ಯಾದಗಿರಿ 7, ಮಂಡ್ಯ ಹಾಗೂ ಉತ್ತರಕನ್ನಡದಲ್ಲಿ ತಲಾ 6, ಬಾಗಲಕೋಟೆ, ಶಿವಮೊಗ್ಗ ಹಾಗೂ ಕೋಲಾರದಲ್ಲಿ ತಲಾ 6, ಮೈಸೂರು 5, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯಲ್ಲಿ ತಲಾ 4, ಹಾಸನ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ 3, ವಿಜಯಪುರ, ತುಮಕೂರು, ಹಾವೇರಿ ಯಲ್ಲಿ ತಲಾ 2, ಬೀದರ, ಬೆಳಗಾವಿ, ದಾವಣಗೆರೆ, ರಾಮನಗರ, ಚಿತ್ರದುರ್ಗ ತಲಾ ಒಂದು ಹೀಗೆ ಒಟ್ಟು 29 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಶುಕ್ರವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ 3, ಕೋಲಾರ, ಧಾರವಾಡ, ಕಲಬರುಗಿ, ಬೀದರ, ಬಾಗಲಕೋಟೆ, ಶಿವಮೊಗ್ಗ, ಬಳ್ಳಾರಿಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಪಿ-10862 ಸೋಂಕಿತ 45 ವರ್ಷದ ವ್ಯಕ್ತಿ, ಪಿ-10979 ಸೋಂಕಿತ 63 ವರ್ಷದ ವೃದ್ದೆ, ಪಿ-10983 ಸೋಂಕಿತ 66 ವರ್ಷದ ವೃದ್ದೆ, ಕೋಲಾರ ಪಿ-8495 ಸೋಂಕಿತ 43 ವರ್ಷದ ಮಹಿಳೆ, ಧಾರವಾಡ ಪಿ-8753 ಸೋಂಕಿತ 42 ವರ್ಷದ ವ್ಯಕ್ತಿ, ಶಿವಮೊಗ್ಗ ಪಿ-9546 ಸೋಂಕಿತ 75 ವರ್ಷದ ವೃದ್ದೆ, ಬಾಗಲಕೋಟೆ ಪಿ-10173 ಸೋಂಕಿತ 57 ವರ್ಷದ ವ್ಯಕ್ತಿ, ಬೀದರ ಪಿ-10684 ಸೋಂಕಿತ 71 ವರ್ಷದ ವೃದ್ದ, ಕಲಬುರಗಿ ಪಿ10693 ಸೋಂಕಿತ 55 ವರ್ಷದ ವ್ಯಕ್ತಿ, ಬಳ್ಳಾರಿ ಪಿ-10729 ಸೋಂಕಿತ 65 ವರ್ಷದ ವೃದ್ದೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ವಿವರಿಸಲಾಗಿದೆ.