ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 19 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 1105 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 14295 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 176 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 7683 ಜನ ಗುಣಮುಖರಾಗಿದ್ದು, 6382 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 268 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಸೋಮವಾರವೂ 19 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 226 ಕ್ಕೆ ಏರಿಕೆಯಾದಂತಾಗಿದೆ.
ಸೋಮವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ. ನಿನ್ನೇ 783 ಸೋಂಕಿತರನ್ನು ಕಂಡಿದ್ದ ಬೆಂಗಳೂರು ಇಂದು ಬರೋಬ್ಬರಿ 738 ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ಬಳ್ಳಾರಿ 76, ದಕ್ಷಿಣ ಕನ್ನಡ 32, ಬೀದರ 28, ಉತ್ತರ ಕನ್ನಡ 24, ಕಲಬುರಗಿ 23, ಹಾಸನ ಹಾಗೂ ವಿಜಯಪುರ ತಲಾ22, ತುಮಕೂರು ಹಾಗೂ ಉಡುಪಿ ತಲಾ 18, ಧಾರವಾಡ ಹಾಗೂ ಚಿಕ್ಕಮಗಳೂರು ತಲಾ 17, ಚಿಕ್ಕಬಳ್ಳಾಪುರ 15, ಯಾದಗಿರಿ 9, ಮಂಡ್ಯ 8, ಮೈಸೂರು 6, ಶಿವಮೊಗ್ಗ 5, ರಾಯಚೂರು, ಬಾಗಲಕೋಟೆ, ಗದಗ, ಕೋಲಾರದಲ್ಲಿ ತಲಾ 4, ಬೆಂಗಳೂರು ಗ್ರಾಮಾಂತರ 3, ದಾವಣಗೆರೆ, ರಾಮನಗರ ಹಾಗೂ ಚಿತ್ರದುರ್ಗದಲ್ಲಿ ತಲಾ 2, ಹಾವೇರಿ ಹಾಗೂ ಕೊಡಗುದಲ್ಲಿ ತಲಾ ಒಂದು ಹೀಗೆ ಒಟ್ಟು 27 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಸೋಮವಾರವೂ ಮುಂದುವರೆದಿದ್ದು, ಗಣಿನಾಡು ಬಳ್ಳಾರಿ ಯಲ್ಲಿ ಬರೋಬ್ಬರಿ 12 ಜನ ಸಾವನ್ನಪ್ಪಿದ್ದರೆ, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ 4, ದಕ್ಷಿಣಕನ್ನಡ, ಹಾಸನ ಹಾಗೂ ಬಾಗಲಕೋಟೆಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.