ರಾಜ್ಯ

ರಾಜ್ಯದಲ್ಲಿ ಶನಿವಾರ 93 ಸಾವು, 7178 ಜನರಿಗೆ ಕೊರೋನಾ

ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 93 ಜನ ಸಾವನ್ನಪ್ಪಿದ್ದಾರೆ.

ಮತ್ತೆ ಹೊಸದಾಗಿ 7178 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,72,102ಕ್ಕೆ ಏರಿಕೆಯಾಗಿದೆ.

 ಇಂದು ರಾಜ್ಯದಲ್ಲಿ 5006 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  89,238 ಜನ ಗುಣಮುಖರಾಗಿದ್ದು,  79,765 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 683 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಶನಿವಾರವೂ 93 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆನ3091ಕ್ಕೆ ಏರಿಕೆಯಾದಂತಾಗಿದೆ.

ಶುಕ್ರವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.

ಬೆಂಗಳೂರಿನಲ್ಲಿ 2665,ಬರೋಬ್ಬರಿ ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.

ಇನ್ನೂಳಿದಂತೆ  ಬಳ್ಳಾರಿ– 607, ಉಡುಪಿ-313, ಬೆಳಗಾವಿ-302, ರಾಯಚೂರು-295, ಕಲಬುರಗಿ ಮತ್ತು ಧಾರವಾಡ-261, ಯಾದಗಿರಿ-200, ದಕ್ಷಿಣ ಕನ್ನಡ-194, ತುಮಕೂರು-177, ಕೊಪ್ಪಳ-163, ಬಾಗಲಕೋಟೆ-149, ಕೊಪ್ಪಳ-163, ಬಾಗಲಕೋಟೆ-149, ವಿಜಯಪುರ-143, ಮೈಸೂರು-138, ಹಾಸನ-133, ದಾವಣಗೆರೆ-132, ಉತ್ತರ ಕನ್ನಡ-117, ಮಂಡ್ಯ-101, ಹಾವೇರಿ-95, ಗದಗ-94, ರಾಯಮನಗರ-93, ಚಿಕ್ಕಮಗಳೂರು-89, ಶಿವಮೊಗ್ಗ-77, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ತಲಾ-66, ಚಿತ್ರದುರ್ಗ-63, ಚಾಮರಾಜನಗರ-62, ಕೋಲಾರ-57, ಬೀದರ್-47 ಮತ್ತು ಕೊಡಗು-22  ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಾವಿನ ರಣಕೇಕೆ ರಾಜ್ಯದಲ್ಲಿ ಶನಿವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ  18 ಜನ ಸಾವನ್ನಪ್ಪಿದ್ದಾರೆ.

ಮೈಸೂರು 10, ಬಳ್ಳಾರಿ 9, ಕಲಬುರಗಿ 7, ಧಾರವಾಡ ಹಾಗೂ ದಕ್ಷಿಣ ಕನ್ನಡ ಹಾಗೂ ಹಾಸನ ತಲಾ 6, ಉಡುಪಿ 5, ಚಾಮರಾಜನಗರ 3, ರಾಯಚೂರು, ಯಾದಗಿರಿ, ತುಮಕೂರು, ದಾವಣಗೆರೆ, ಹಾವೇರಿ, ರಾಮನಗರ, ಚಿಕ್ಕಮಗಳೂರು ಹಾಗೂ ಬೀದರ ತಲಾ 2, ಕೊಡಗು, ಶಿವಮೊಗ್ಗ, ಗದಗ, ಮಂಡ್ಯ, ವಿಜಯಪುರ, ಕೊಪ್ಪಳ ಹಾಗೂ ಬೆಳಗಾವಿ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *