ಬೆಂಗಳೂರು ಪ್ರಜಾಕಿರಣ.ಕಾಮ್ :
ರಾಜ್ಯದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮಿತಿಮೀರಿದೆ.
ಕರ್ನಾಟಕದಿಂದ ನೂರಾರು ಕೋಟಿ
ಬ್ಲ್ಯಾಕ್ ಮನಿ ದೇಶದೆಲ್ಲಡೆ ಹೋಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು.
ಅವರು ಮೈಸೂರಿನ ಮಹಾರಾಜ್ ಕಾಲೇಜಿನ ಆವರಣದಲ್ಲಿ ಮೈಸೂರು, ಹಾಸನ, ಮಂಡ್ಯದ ಬಿಜೆಪಿ ಜೆಡಿಎಸ್ ಮೃತ್ರಿ ಅಭ್ಯರ್ಥಿ ಗಳ ಪರ ನಡೆದ ಬೃಹತ್ ಸಮಾವೇಶದಲ್ಲಿ ಭಾಷಣ ಮಾಡಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ನ ಮಿತಿ ಮೀರಿದ ಭ್ರಷ್ಟಾಚಾರದಿಂದ ಖಜಾನೆ ಸಂಪೂರ್ಣ ಖಾಲಿಯಾಗಿದ್ದು, ಅಭಿವೃದ್ಧಿ ಯೋಜನೆಗಳಿಗೆ ಅನುದಾನವಿಲ್ಲದಾಗಿದೆ ಎಂದು ಕಿಡಿಕಾರಿದರು.
ವಿದ್ಯಾರ್ಥಿಗಳ ಸ್ಕಾಲರ್ ಶಿಪ್, ರೈತರ ಸಹಾಯ ಧನ ಸ್ಥಗಿತಗೊಳಿಸಿದ್ದಾರೆ ಎಂದು ದೂರಿದರು.
ಇವತ್ತಿನ ದಿನ, ಈ ಲೋಕಸಭಾ ಚುನಾವಣೆ ಹಾಗೂ ಮುಂದಿನ ಐದು ವರ್ಷಕ್ಕಾಗಿ ಬಹು ಮುಖ್ಯವಾದ ದಿನವಾಗಿದೆ.
ಏಪ್ರಿಲ್ 26 ರಂದು ನೀವು ಎನ್.ಡಿ.ಎ ಅಭ್ಯರ್ಥಿಗಳಿಗೆ ನೀಡುವ ಪ್ರತಿಯೊಂದು ಮತವೂ ನನಗೆ ಮತ್ತಷ್ಟು ಬಲ ತುಂಬಲಿದೆ ಎಂದರು.
ಕರ್ನಾಟಕದ ಪಾರಂಪರಿಕ ತಾಣಗಳನ್ನು ಅಭಿವೃದ್ಧಿಪಡಿಸಿ ಅವುಗಳನ್ನು ವಿಶ್ವ ಪ್ರವಾಸೋದ್ಯಮ ನಕಾಶೆಯಲ್ಲಿ ಸೇರಿಸಲಾಗುವುದು ಎಂದು ಹೇಳಿದರು.
ಅದಕ್ಕೆ ಧ್ವನಿ ಗೂಡಿಸಿದ ಮಾಜಿ ಪ್ರಧಾನಿ ಹೆಚ್ಡಿ. ದೇವೆಗೌಡ ಕೂಡ ಯಾರ ಹೆಸರು ಹೇಳದೆ ಭ್ರಷ್ಟಾಚಾರದ ಬಗ್ಗೆ ಗಂಭೀರವಾದ ಆರೋಪ ಮಾಡಿದರು.