ಬೆಂಗಳೂರು prajakiran.com : ರಾಜ್ಯದಲ್ಲಿ ಗುರುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 6 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 442 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 10,560ಕ್ಕೆ ಏರಿಕೆಯಾಗಿದೆ.
442 ಸೋಂಕಿತರಲ್ಲಿ, 81 ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದಾರೆ. 23 ಜನಅಂತರ್ ರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ.
ಇಂದು ರಾಜ್ಯದಲ್ಲಿ 519 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 6670 ಜನ ಗುಣಮುಖರಾಗಿದ್ದು, 3716 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 160 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಗುರುವಾರವೂ 6 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 170ಕ್ಕೆ ಏರಿಕೆಯಾದಂತಾಗಿದೆ.
ಗುರುವಾರ ಪತ್ತೆಯಾದ 442 ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ. ನಿನ್ನೇ 173 ಸೋಂಕಿತರನ್ನು ಕಂಡಿದ್ದ ಬೆಂಗಳೂರು ಇಂದು 113 ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ಕಲಬುರಗಿ 35, ರಾಮನಗರ 33, ದಕ್ಷಿಣ ಕನ್ನಡ 29 , ಬಳ್ಳಾರಿ ಹಾಗೂ ಧಾರವಾಡದಲ್ಲಿ ತಲಾ 26, ಮೈಸೂರು 22, ಬಾಗಲಕೋಟಹಾಗೂ ಕೊಡಗು ತಲಾ 18, ಉಡುಪಿ 14, ಹಾಸನ ಹಾಗೂ ಬೆಂಗಳೂರು ಗ್ರಾಮಾಂತರ 12, ಉತ್ತರ ಕನ್ನಡ 11, ವಿಜಯಪುರ, ಗದಗ ಹಾಗೂ ಹಾವೇರಿಯಲ್ಲಿ ತಲಾ 10, ಮಂಡ್ಯ 9, ಬೀದರ 8, ದಾವಣಗೆರೆ7, ಬೆಳಗಾವಿ, ಶಿವಮೊಗ್ಗ ಹಾಗೂ ಕೋಲಾರದಲ್ಲಿ ತಲಾ 4, ಯಾದಗಿರಿ ಹಾಗೂ ಚಿಕ್ಕಬಳ್ಳಾಪುರದಲ್ಲಿ ತಲಾ 2, ಚಾಮರಾಜನಗರ, ತುಮಕೂರು ಹಾಗೂ ಚಿಕ್ಕಮಗಳೂರಿನಲ್ಲಿ ತಲಾ ಒಂದು ಹೀಗೆ ಒಟ್ಟು 27 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಗುರುವಾರವೂ ಮುಂದುವರೆದಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ ಮೂರು, ದಕ್ಷಿಣ ಕನ್ನಡ ಹಾಗೂ ಕಲಬರುಗಿ ಮತ್ತು ಮೈಸೂರಿನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ಬೆಂಗಳೂರು ಗ್ರಾಮಾಂತರ ಪಿ- 10402 ಸೋಂಕಿತ 80 ವರ್ಷದ ವೃದ್ದ, ಪಿ-10403 ಸೋಂಕಿತ 60 ವರ್ಷದ ವೃದ್ದೆ, ಪಿ-10410 ಸೋಂಕಿತ 38 ವರ್ಷದ ವ್ಯಕ್ತಿ, ಕಲಬುರಗಿ ಪಿ-10270 ಸೋಂಕಿತ 61 ವರ್ಷದ ವೃದ್ದ, ದಕ್ಷಿಣ ಕನ್ನಡ ಪಿ- 10274 ಸೋಂಕಿತ 68 ವರ್ಷದ ವೃದ್ದೆ, ಮೈಸೂರ ಪಿ-10357 ಸೋಂಕಿತ 87 ವರ್ಷದ ವೃದ್ದ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ವಿವರಿಸಲಾಗಿದೆ.