ರಾಜ್ಯದಲ್ಲಿ 6287 ಜನ ಬಿಡುಗಡೆ
ಬೆಂಗಳೂರು prajakiran.com : ರಾಜ್ಯದಲ್ಲಿ ಬುಧವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 113 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 9860 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ 3,61,341 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 6287 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 2,60,913 ಜನ ಗುಣಮುಖರಾಗಿದ್ದು, 94,459 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 751 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಬುಧವಾರವೂ 113 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 5950ಕ್ಕೆ ಏರಿಕೆಯಾದಂತಾಗಿದೆ.
ಬುಧವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.
ಬೆಂಗಳೂರಿನಲ್ಲಿ ಬರೋಬ್ಬರಿ 3420ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ಬಾಗಲಕೋಟೆ 166, ಬಳ್ಳಾರಿ 433, ಬೆಳಗಾವಿ 470, ಬೆಂಗಳೂರು ಗ್ರಾಮಾಂತರ 146, ಬೀದರ 62, ಚಾಮರಾಜನಗರ 67, ಚಿಕ್ಕಬಳ್ಳಾಪುರ 100, ಚಿಕ್ಕಮಗಳೂರು 117, ಚಿತ್ರದುರ್ಗ 174, ದಕ್ಷಿಣ ಕನ್ನಡ 414, ದಾವಣಗೆರೆ 321, ಧಾರವಾಡ 327, ಗದಗ 195, ಹಾಸನ 290, ಹಾವೇರಿ 149, ಕಲಬುರಗಿ 194, ಕೊಡಗು 25, ಕೋಲಾರ 83, ಕೊಪ್ಪಳ 282, ಮಂಡ್ಯ 245, ಮೈಸೂರು 667, ರಾಯಚೂರು 232, ರಾಮನಗರ 59, ಶಿವಮೊಗ್ಗ 342, ತುಮಕೂರು 357, ಉಡುಪಿ 169, ಉತ್ತರಕನ್ನಡ 126, ವಿಜಯಪುರ 122, ಯಾದಗಿರಿ 106 ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಬುಧವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ 32, ಮೈಸೂರು 11, ಧಾರವಾಡ 10, ಶಿವಮೊಗ್ಗ 7, ದಕ್ಷಿಣ ಕನ್ನಡ 6, ಬಳ್ಳಾರಿ, ಹಾವೇರಿ ತಲಾ 5, ಚಿಕ್ಕಬಳ್ಳಾಪುರ, ಹಾಸನ ತಲಾ 4, ಚಿತ್ರದುರ್ಗ, ಗದಗ, ತುಮಕೂರು, ಉಡುಪಿ ಹಾಗೂ ವಿಜಯಪುರ ತಲಾ 3, ಹಾವೇರಿ, ಕೊಪ್ಪಳ, ಮಂಡ್ಯ ತಲಾ 2, ಬೆಳಗಾವಿ, ಬೀದರ, ಚಾಮರಾಜನಗರ, ದಾವಣಗೆರೆ, ರಾಮನಗರ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.