ರಾಜ್ಯದಲ್ಲಿ 8015 ಜನ ಬಿಡುಗಡೆ
ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 141 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 5773 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ 4,04,324ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 8015 ಜನ ಬಿಡುಗಡೆಗೊಂಡಿದ್ದು, ಈವರೆಗೆ 3,00,770 ಒಟ್ಟು ಜನ ಗುಣಮುಖರಾಗಿದ್ದು, 99266 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 794 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಸೋಮವಾರವೂ 141 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 6534ಕ್ಕೆ ಏರಿಕೆಯಾದಂತಾಗಿದೆ.
ಸೋಮವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.
ಬೆಂಗಳೂರಿನಲ್ಲಿ ಬರೋಬ್ಬರಿ 2942 ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ಬಾಗಲಕೋಟೆ 126, ಬಳ್ಳಾರಿ 266, ಬೆಳಗಾವಿ 75, ಬೆಂಗಳೂರು ಗ್ರಾಮಾಂತರ 77,ಬೀದರ 32, ಚಾಮರಾಜನಗರ 20, ಚಿಕ್ಕಬಳ್ಳಾಪುರ 82, ಚಿಕ್ಕಮಗಳೂರು 101, ಚಿತ್ರದುರ್ಗ 50, ದಕ್ಷಿಣ ಕನ್ನಡ 152, ದಾವಣಗೆರೆ 199, ಧಾರವಾಡ 29, ಗದಗ 87, ಹಾಸನ 128, ಹಾವೇರಿ 53, ಕಲಬುರಗಿ 141,ಕೊಡಗು 11, ಕೋಲಾರ 26, ಕೊಪ್ಪಳ 139, ಮಂಡ್ಯ 169, ಮೈಸೂರು 221, ರಾಯಚೂರು 22, ರಾಮನಗರ 11, ಶಿವಮೊಗ್ಗ 150, ತುಮಕೂರು 25, ಉಡುಪಿ 113, ಉತ್ತರಕನ್ನಡ 77, ವಿಜಯಪುರ 112, ಯಾದಗಿರಿ 137 ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಸೋಮವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ 48, ಕೊಪ್ಪಳ ಹಾಗೂ ಧಾರವಾಡ ತಲಾ 10, ಮೈಸೂರು 9, ದಕ್ಷಿಣಕನ್ನಡ ಹಾಗೂ ಬೆಳಗಾವಿ ತಲಾ 8, ಬಳ್ಳಾರಿ 7, ಹಾಸನ ಹಾಗೂ ಕಲಬುರಗಿ 4 ಉತ್ತರಕನ್ನಡ, ದಾವಣಗೆರೆ ತಲಾ 3, ಚಿಕ್ಕಮಗಳೂರು,ಗದಗ, ತುಮಕೂರು, ಉಡುಪಿ ಹಾಗೂ ವಿಜಯಪುರ ತಲಾ 2, ಬಾಗಲಕೊಟೆ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ,ಚಿಕ್ಕಬಳ್ಳಾಪುರ, ಕೊಡಗು, ಮಂಡ್ಯ, ರಾಮನಗರ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.