ರಾಜ್ಯದಲ್ಲಿ8110 ಜನ ಬಿಡುಗಡೆ
ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 115 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 8324 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ 3,27,076 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 8110 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 2,35,128ಜನ ಗುಣಮುಖರಾಗಿದ್ದು, 86,446ಸಕ್ರಿಯ ಪ್ರಕರಣಗಳಿವೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 721 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಶನಿವಾರವೂ 115 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 5483ಕ್ಕೆ ಏರಿಕೆಯಾದಂತಾಗಿದೆ.
ಶನಿವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.
ಬೆಂಗಳೂರಿನಲ್ಲಿ ಬರೋಬ್ಬರಿ 2993ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ಬಾಗಲಕೋಟೆ 152, ಬಳ್ಳಾರಿ 468, ಬೆಳಗಾವಿ 276, ಬೆಂಗಳೂರು ಗ್ರಾಮಾಂತರ 182, ಬೀದರ 46, ಚಾಮರಾಜನಗರ 45, ಚಿಕ್ಕಬಳ್ಳಾಪುರ 102, ಚಿಕ್ಕಮಗಳೂರು 129, ಚಿತ್ರದುರ್ಗ 100, ದಕ್ಷಿಣ ಕನ್ನಡ 272, ದಾವಣಗೆರೆ 319, ಧಾರವಾಡ 290, ಗದಗ 181, ಹಾಸನ 325, ಹಾವೇರಿ 93, ಕಲಬುರಗಿ 173, ಕೊಡಗು 46, ಕೋಲಾರ 51, ಕೊಪ್ಪಳ 238, ಮಂಡ್ಯ 194, ಮೈಸೂರು 309, ರಾಯಚೂರು 186, ರಾಮನಗರ 153, ಶಿವಮೊಗ್ಗ 333, ತುಮಕೂರು 138, ಉಡುಪಿ 172, ಉತ್ತರಕನ್ನಡ 130, ವಿಜಯಪುರ 130, ಯಾದಗಿರಿ 98 ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಶುಕ್ರವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ 25, ಮೈಸೂರು 11, ಹಾವೇರಿ ಹಾಗೂ ಧಾರವಾಡ ತಲಾ 9, ದಕ್ಷಿಣ ಕನ್ನಡ 7, ಹಾಸನ 6, ಶಿವಮೊಗ್ಗ ಹಾಗೂ ತುಮಕೂರು ತಲಾ 5, ಬಳ್ಳಾರಿ, ಕಲಬುರಗಿ ಹಾಗೂ ವಿಜಯಪುರ ತಲಾ 4, ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ಕೋಲಾರ, ಕೊಪ್ಪಳ, ಮಂಡ್ಯ ತಲಾ 3,ರಾಯಚೂರು 2, ಬಾಗಲಕೋಟೆ, ಗದಗ, ಕೊಡಗು, ರಾಮನಗರ, ಉತ್ತರಕನ್ನಡ ಹಾಗು ಯಾದಗಿರಿ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.