ಬೆಂಗಳೂರು prajakiran.com : ರಾಜ್ಯದಲ್ಲಿ ಗುರುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 19 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 1502 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 18016 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 271 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 8334 ಜನ ಗುಣಮುಖರಾಗಿದ್ದು, 9406 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 161 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಗುರುವಾರವೂ 19 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 272 ಕ್ಕೆ ಏರಿಕೆಯಾದಂತಾಗಿದೆ.
ಗುರುವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ. ಬೆಂಗಳೂರು ಇಂದು ಬರೋಬ್ಬರಿ 889 ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ದಕ್ಷಿಣ ಕನ್ನಡ 90, ಮೈಸೂರು 68, ಬಳ್ಳಾರಿ 65, ಧಾರವಾಡ 47, ವಿಜಯಪುರ ಹಾಗೂ ರಾಮನಗರ 39, ಕಲಬರುಗಿ 38, ಬೀದರ 32, ತುಮಕೂರು 26, ಶಿವಮೊಗ್ಗ 23, ಮಂಡ್ಯ 19, ಉತ್ತರಕನ್ನಡ 17, ಹಾಸನ 15, ಉಡುಪಿ 14, ಕೋಲಾರ 12, ರಾಯಚೂರು 11, ಬಾಗಲಕೋಟೆ 10, ದಾವಣಗೆರೆ 8, ಯಾದಗಿರಿ ಹಾಗೂ ಬೆಳಗಾವಿ ತಲಾ 7, ಕೊಡಗು 6, ಬೆಂಗಳುರು ಗ್ರಾಮಾಂತರ 5, ಹಾವೇರಿ ಹಾಗೂ ಕೊಪ್ಪಳ ತಲಾ 4, ಚಿತ್ರದುರ್ಗ 3, ಗದಗ 2, ಚಿಕ್ಕಬಳ್ಳಾಪುರ ಹಾಗೂ ಚಿಕ್ಕಮಗಳೂರು ತಲಾ ಒಂದು ಹೀಗೆ ಒಟ್ಟು 29ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಗುರುವಾರವೂ ಮುಂದುವರೆದಿದ್ದು, ಗಣಿನಾಡು ಬಳ್ಳಾರಿ ಯಲ್ಲಿ 4 ಜನ ಸಾವನ್ನಪ್ಪಿದ್ದರೆ, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ 3, ದಕ್ಷಿಣ ಕನ್ನಡ 3, ಉಡುಪಿ, ಗದಗ, ಕೊಪ್ಪಳ, ಮೈಸೂರು, ಹಾಸನ, ಕಲಬರುಗಿ, ತುಮಕೂರ, ಬೆಳಗಾವಿ, ಉತ್ತರ ಕನ್ನಡ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.