ರಾಜ್ಯ

ರಾಜ್ಯದಲ್ಲಿ ಸೋಮವಾರ 6495 ಕರೋನಾ, 113 ಸಾವು

ರಾಜ್ಯದಲ್ಲಿ 7238 ಜನ ಬಿಡುಗಡೆ

ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 113 ಜನ ಸಾವನ್ನಪ್ಪಿದ್ದಾರೆ.

ಮತ್ತೆ ಹೊಸದಾಗಿ 6495 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ 3,42,423ಕ್ಕೆ  ಏರಿಕೆಯಾಗಿದೆ.

 ಇಂದು ರಾಜ್ಯದಲ್ಲಿ 7238 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 2,49,467 ಜನ ಗುಣಮುಖರಾಗಿದ್ದು,  87,235 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 747 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಸೋಮವಾರವೂ 113 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 5702ಕ್ಕೆ ಏರಿಕೆಯಾದಂತಾಗಿದೆ.

ಸೋಮವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.

ಬೆಂಗಳೂರಿನಲ್ಲಿ ಬರೋಬ್ಬರಿ 1862ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.

ಇನ್ನೂಳಿದಂತೆ ಬಾಗಲಕೋಟೆ 172, ಬಳ್ಳಾರಿ 365, ಬೆಳಗಾವಿ 154, ಬೆಂಗಳೂರು ಗ್ರಾಮಾಂತರ 73, ಬೀದರ 30, ಚಾಮರಾಜನಗರ 51, ಚಿಕ್ಕಬಳ್ಳಾಪುರ 68, ಚಿಕ್ಕಮಗಳೂರು 100, ಚಿತ್ರದುರ್ಗ 286, ದಕ್ಷಿಣ ಕನ್ನಡ 270,  ದಾವಣಗೆರೆ 257, ಧಾರವಾಡ 279, ಗದಗ 178, ಹಾಸನ 217, ಹಾವೇರಿ 63, ಕಲಬುರಗಿ 161, ಕೊಡಗು 17, ಕೋಲಾರ 60, ಕೊಪ್ಪಳ 200, ಮಂಡ್ಯ 159, ಮೈಸೂರು 405, ರಾಯಚೂರು 140, ರಾಮನಗರ 69, ಶಿವಮೊಗ್ಗ 168, ತುಮಕೂರು 316, ಉಡುಪಿ 83, ಉತ್ತರಕನ್ನಡ 86, ವಿಜಯಪುರ 84, ಯಾದಗಿರಿ 122   ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಾವಿನ ರಣಕೇಕೆ ರಾಜ್ಯದಲ್ಲಿ ಶುಕ್ರವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ  27,  ದಕ್ಷಿಣ ಕನ್ನಡ 12, ಧಾರವಾಡ 9, ಮೈಸೂರು, ದಾವಣಗೆರೆ ತಲಾ 6, ಬಳ್ಳಾರಿ, ಬೆಳಗಾವಿ, ಹಾವೇರಿ ತಲಾ 5, ಕಲಬುರಗಿ, ಮಂಡ್ಯ ಹಾಗೂ ಶಿವಮೊಗ್ಗ ತಲಾ 4, ವಿಜಯಪುರ 3, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ರಾಯಚೂರು, ರಾಮನಗರ ಹಾಗೂ ಉಡುಪಿ ತಲಾ 2, ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೀದರ, ಚಿಕ್ಕಬಳ್ಳಾಪುರ, ಗದಗ, ಕೋಲಾರ, ಕೊಪ್ಪಳ ಹಾಗೂ ಉತ್ತರಕನ್ನಡ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *