ರಾಜ್ಯದಲ್ಲಿ 8061 ಜನ ಬಿಡುಗಡೆ
ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 130 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 5851 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2, 83,665 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 8061 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 1,97,625 ಜನ ಗುಣಮುಖರಾಗಿದ್ದು,81,211 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 768 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಸೋಮವಾರವೂ 130 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 4810ಕ್ಕೆ ಏರಿಕೆಯಾದಂತಾಗಿದೆ.
ಸೋಮವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.
ಬೆಂಗಳೂರಿನಲ್ಲಿ ಬರೋಬ್ಬರಿ 1918 ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ಬಾಗಲಕೋಟೆ 53, ಬಳ್ಳಾರಿ 306, ಬೆಳಗಾವಿ 319, ಬೆಂಗಳೂರು ಗ್ರಾಮಾಂತರ 35, ಬೀದರ 83, ಚಾಮರಾಜನಗರ 29, ಚಿಕ್ಕಬಳ್ಳಾಪುರ 76, ಚಿಕ್ಕಮಗಳೂರು 123, ಚಿತ್ರದುರ್ಗ 28, ದಕ್ಷಿಣ ಕನ್ನಡ 201, ದಾವಣಗೆರೆ 167, ಧಾರವಾಡ 221, ಗದಗ141, ಹಾಸನ 200, ಹಾವೇರಿ 148, ಕಲಬುರಗಿ 176, ಕೊಡಗು 35, ಕೋಲಾರ 45, ಕೊಪ್ಪಳ 271, ಮಂಡ್ಯ 82, ಮೈಸೂರು 202, ರಾಯಚೂರು 183, ರಾಮನಗರ 49, ಶಿವಮೊಗ್ಗ 220, ತುಮಕೂರು 85, ಉಡುಪಿ 104, ಉತ್ತರಕನ್ನಡ 91, ವಿಜಯಪುರ 138, ಯಾದಗಿರಿ 122 ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಸೋಮವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ 26, ಮೈಸೂರು 25, ಕೊಪ್ಪಳ ಹಾಗೂ ದಾವಣಗೆರೆ 7, ಬಳ್ಳಾರಿ, ದಕ್ಷಿಣ ಕನ್ನಡ,ಹಾಸನ, ಹಾವೇರಿ ತಲಾ 6, ಬೆಳಗಾವಿ 5, ತುಮಕೂರು, ಉಡುಪಿ ಹಾಗೂ ವಿಜಯಪುರ ತಲಾ 4, ಬಾಗಲಕೋಟೆ, ಚಿಕ್ಕಮಗಳೂರು, ರಾಮನಗರ 3, ಚಾಮರಾಜನಗರ, ಚಿಕ್ಕಬಳ್ಳಾಪುರ, ಧಾರವಾಡ, ಕಲಬುರಗಿ, ರಾಯಚೂರು ತಲಾ 2, ಯಾದಗಿರಿ, ಉತ್ತರಕನ್ನಡ, ಮಂಡ್ಯ, ಗದಗ ಹಾಗೂ ಬೀದರ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.