ಹುಬ್ಬಳ್ಳಿ prajakiran.com : ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯ ಘಟಕದ ಸಹ ಕಾರ್ಯದರ್ಶಿಯಾಗಿ ಟಿ.ಸೊಣ್ಣಪ್ಪ ನೇಮಕಗೊಂಡಿದ್ದಾರೆ.
ಸೋಣ್ಣಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದೇವಲಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದು, ಅವರು ವಿವಿಧ ಸಾಮಾಜಿಕ ಸೇವಾ ಕಾರ್ಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಟಿ. ಸೊಣ್ಣಪ್ಪ ಇವರನ್ನು ರಾಜ್ಯಾಧ್ಯಕ್ಷ ಅಶೋಕ ಸಜ್ಜನ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಉಪ್ಪಿನ ನೇಮಕ ಮಾಡಿದ್ದಾರೆ. ಅಲ್ಲದೆ, ರಾಜ್ಯ ಸಂಘ ಹಾಗೂ ಜಿಲ್ಲಾ ಸಂಘದ ಸರ್ವ ಪದಾಧಿಕಾರಿಗಳು ಅಭಿನಂದಂದಿಸಿದ್ದಾರೆ.