ರಾಜ್ಯದಲ್ಲಿ 6629 ಜನ ಬಿಡುಗಡೆ
ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 114 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 8818 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2,19,926ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 6629 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 1,34,811 ಜನ ಗುಣಮುಖರಾಗಿದ್ದು, 81,276 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
716 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಶನಿವಾರವೂ 114 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 3818ಕ್ಕೆ ಏರಿಕೆಯಾದಂತಾಗಿದೆ.
ಶನಿವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.
ಬೆಂಗಳೂರಿನಲ್ಲಿ 3495 ಬರೋಬ್ಬರಿ ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ಬಳ್ಳಾರಿ 759, ಮೈಸೂರು 635, ಬೆಳಗಾವಿ 358, ದಾವಣಗೆರೆ 327, ದಕ್ಷಿಣಕನ್ನಡ 271, ಉಡುಪಿ 241, ಧಾರವಾಡ 239, ವಿಜಯಪುರ 232, ಕಲಬುರಗಿ 189, ಕೊಪ್ಪಳ 178, ಬಾಗಲಕೋಟೆ 168, ತುಮಕೂರು 161, ರಾಯಚೂರು 155, ಹಾಸನ 154, ಬೆಂಗಳೂರು ಗ್ರಾಮಾಂತರ 152, ಗದಗ 142, ಶಿವಮೊಗ್ಗ 133, ಹಾವೇರಿ 116, ಬೀದರ 113, ಮಂಡ್ಯ 84, ಚಿಕ್ಕಮಗಳೂರು 79, ಉತ್ತರಕನ್ನಡ 75, ಯಾದಗಿರಿ ಹಾಗೂ ಚಾಮರಾಜನಗರ ತಲಾ 64, ಕೋಲಾರ 55, ರಾಮನಗರ 53, ಕೊಡಗು 48, ಚಿಕ್ಕಬಳ್ಳಾಪುರ 44, ಚಿತ್ರದುರ್ಗ 34 ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಶನಿವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 35 ಜನ ಸಾವನ್ನಪ್ಪಿದ್ದಾರೆ.
ಮೈಸೂರು 10, ಧಾರವಾಡ 7, ದಕ್ಷಿಣಕನ್ನಡ ಹಾಗೂ ಬಳ್ಳಾರಿ ತಲಾ 6, ಬೆಳಗಾವಿ, ದಾವಣಗೆರೆ ತಲಾ 5, ಹಾಸನ, ಚಿಕ್ಕಮಗಳೂರು ತಲಾ 4, ಬೀದರ, ರಾಯಚೂರು ತಲಾ 3, ಉಡುಪಿ, ವಿಜಯಪುರ, ಕಲಬರುಗಿ,ಕೊಪ್ಪಳ, ತುಮಕೂರು, ಬೆಂಗಳೂರು ಗ್ರಾಮಾಂತರ, ಗದಗ, ಹಾವೇರಿ ತಲಾ 2, ಮಂಡ್ಯ, ಉತ್ತರಕನ್ನಡ, ಯಾದಗಿರಿ ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.