8609 ಜನ ಬಿಡುಗಡೆ
ಬೆಂಗಳೂರು prajakiran.com : ರಾಜ್ಯದಲ್ಲಿ ಗುರುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 103 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 6706 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2,03,200ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 8609 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 1,21,242 ಜನ ಗುಣಮುಖರಾಗಿದ್ದು, 78,337ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
727 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಗುರುವಾರವೂ 103 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆನ 3613ಕ್ಕೆ ಏರಿಕೆಯಾದಂತಾಗಿದೆ.
ಗುರುವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.
ಬೆಂಗಳೂರಿನಲ್ಲಿ1893,ಬರೋಬ್ಬರಿ ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ಮೈಸೂರು 522, ಬಳ್ಳಾರಿ 445, ಉಡುಪಿ 402, ದಾವಣಗೆರೆ 328, ಬೆಳಗಾವಿ 288, ಕಲಬುರಗಿ 285, ಧಾರವಾಡ 257, ದಕ್ಷಿಣಕನ್ನಡ 246, ರಾಯಚೂರು 181, ಕೊಪ್ಪಳ 148, ಬಾಗಲಕೋಟೆ ಹಾಗೂ ಬೀದರ 143, ಮಂಡ್ಯ 130, ಹಾಸನ 129, ವಿಜಯಪುರ 121, ಚಿಕ್ಕಮಗಳೂರು 111, ಶಿವಮೊಗ್ಗ 105, ಗದಗ 98, ಹಾವೇರಿ 96, ತುಮಕೂರು 85, ಯಾದಗಿರಿ 83, ಕೋಲಾರ 77, ಬೆಂಗಳೂರು ಗ್ರಾಮಾಂತರ 70, ಚಿತ್ರದುರ್ಗ 67, ಉತ್ತರಕನ್ನಡ 64, ಚಾಮರಾಜನಗರ 56, ಕೊಡಗು 55, ರಾಮನಗರ 53, ಚಿಕ್ಕಬಳ್ಳಾಪುರ 25 ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಗುರುವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 22 ಜನ ಸಾವನ್ನಪ್ಪಿದ್ದಾರೆ.
ಮೈಸೂರು 12, ಬಳ್ಳಾರಿ ಹಾಗೂ ಕಲಬುರಗಿ ತಲಾ 9, ಬೆಳಗಾವಿ, ಧಾರವಾಡ ಹಾಗೂ ದಕ್ಷಿಣ ಕನ್ನಡ ತಲಾ 6, ಕೊಪ್ಪಳ 5, ದಾವಣಗೆರೆ, ಹಾವೇರಿ, ತುಮಕೂರು ತಲಾ 3, ಮಂಡ್ಯ, ಹಾಸನ, ವಿಜಯಪುರ, ಚಿಕ್ಕಮಗಳೂರು, ಉತ್ತರಕನ್ನಡ ಹಾಗೂ ರಾಮನಗರ ತಲಾ 2, ಉಡುಪಿ,ಬಾಗಲಕೋಟೆ, ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.