ಬೆಂಗಳೂರು prajakiran.com : ರಾಜ್ಯದಲ್ಲಿ ಮಂಗಳವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 86 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 6257 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,88,611ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 6473 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 1,05,599 ಜನ ಗುಣಮುಖರಾಗಿದ್ದು, 79,606 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
699 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಮಂಗಳವಾರವೂ 86 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆನ 3398ಕ್ಕೆ ಏರಿಕೆಯಾದಂತಾಗಿದೆ.
ಮಂಗಳವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.
ಬೆಂಗಳೂರಿನಲ್ಲಿ1610,ಬರೋಬ್ಬರಿ ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ಬಳ್ಳಾರಿ 736, ಬೆಳಗಾವಿ 575, ಧಾರವಾಡ 276, ದಕ್ಷಿಣ ಕನ್ನಡ 243,ಮೈಸೂರು 238, ಉಡುಪಿ 219, ರಾಯಚೂರು 201, ಶಿವಮೊಗ್ಗ 189, ದಾವಣಗೆರೆ 172, ಕೊಪ್ಪಳ 169, ಕಲಬುರ್ಗಿ 156, ಹಾಸನ 146, ಮಂಡ್ಯ 141, ಬಾಗಲಕೋಟೆ 135, ವಿಜಯಪುರ 121, ಯಾದಗಿರಿ 102, ರಾಮನಗರ 96, ಚಿಕ್ಕಮಗಳೂರು 93, ತುಮಕೂರು 89, ಗದಗ 78, ಬೀದರ ಹಾಗೂ ಉತ್ತರಕನ್ನಡ ತಲಾ 73, ಚಾಮರಾಜನಗರ 72, ಕೋಲಾರ 69, ಚಿತ್ರದುರ್ಗ 47,ಕೊಡಗು 41, ಹಾವೇರಿ 36, ಚಿಕ್ಕಬಳ್ಳಾಪುರ 33, ಬೆಂಗಳೂರು ಗ್ರಾಮಾಂತರ 28 ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಮಂಗಳವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 17 ಜನ ಸಾವನ್ನಪ್ಪಿದ್ದಾರೆ.
ಮೈಸೂರು 11, ಧಾರವಾಡ ಹಾಗೂ ದಕ್ಷಿಣ ಕನ್ನಡ ತಲಾ 9, ಬಳ್ಳಾರಿ, ಬೆಳಗಾವಿ, ದಾವಣಗೆರೆ ತಲಾ 4, ಕೊಪ್ಪಳ, ಹಾಸನ, ಚಿಕ್ಕಮಗಳೂರು ಹಾಗೂ ಹಾವೇರಿ ತಲಾ 3, ರಾಯಚೂರು, ಮಂಡ್ಯ, ವಿಜಯಪುರ, ಗದಗ, ಬೀದರ ಹಾಗೂ ಚಿಕ್ಕಬಳ್ಳಾಪುರ ತಲಾ 2, ಕಲಬುರಗಿ, ಬಾಗಲಕೋಟೆ, ತುಮಕೂರು, ಚಾಮರಾಜನಗರ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.