ರಾಜ್ಯ

ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿ ರಾತ್ರೋ ರಾತ್ರಿ ವೇಳಾಪಟ್ಟಿ ಬದಲಿಸಿದ ಕವಿವಿ

ಧಾರವಾಡ prajakiran.com : ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಎಂ ಎ ಕನ್ನಡ ಹಾಗೂ ಎಂ ಎ ಇತಿಹಾಸ ಪ್ರವೇಶ ಪರೀಕ್ಷೆ ಎಕಕಾಲಕ್ಕೆ ನಿಗದಿಪಡಿಸಿದ್ದರಿಂದ ನೂರಾರು ವಿದ್ಯಾರ್ಥಿಗಳು ಕಂಗಲಾಗಿದ್ದರು.

ಇದರಿಂದ ದಿಕ್ಕೆಟ್ಟ ವಿದ್ಯಾರ್ಥಿಗಳು ಸಾಮಾಜಿಕ ಕಾರ್ಯಕರ್ತರು ಹಾಗೂ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರ ಮೊರೆ ಹೋಗಿದ್ದರು.

ಬೆಂಗಳೂರಿನಲ್ಲಿದ್ದ ಕವಿವಿ ಕುಲಪತಿ ಡಾ. ಕೆ.ಬಿ. ಗುಡಿಸಿ ಅವರು ತಕ್ಷಣ ಸ್ಪಂದಿಸಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾತ್ರೋ ರಾತ್ರಿ ವೇಳಾ ಪಟ್ಟಿಯಲ್ಲಿ ಬದಲಾವಣೆ ಮಾಡಿ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದರು.

ಇದರಿಂದ ನೆಮ್ಮದಿಯ ನಿಟ್ಟುಸಿರು ಬಿಟ್ಟ ವಿದ್ಯಾರ್ಥಿಗಳು ಬದಲಾದ ಸಮಯದಲ್ಲಿ ಎರಡು ಪ್ರವೇಶ ಪರೀಕ್ಷೆ ಬರೆದು ಸಮಾಧಾನ ಪಟ್ಟುಕೊಂಡರು.

ಅಲ್ಲದೆ, ಕವಿವಿ ಕ್ರಮಕ್ಕೆ ಮುಕ್ತ ಕಂಠದಿಂದ ಶ್ಲಾಘಿಸಿದರು. ತಕ್ಷಣ ವಿವಿ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿರುವುದು ಸಕರಾತ್ಮಕ ಬೆಳವಣಿಗೆಯಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *