ರಾಜ್ಯದಲ್ಲಿ 7201 ಜನ ಬಿಡುಗಡೆ
ಬೆಂಗಳೂರು prajakiran.com : ರಾಜ್ಯದಲ್ಲಿ ಬುಧವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 126 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 8642 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2,49,590 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 7201 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 1,64,150 ಜನ ಗುಣಮುಖರಾಗಿದ್ದು, 81,097 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
704 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಬುಧವಾರವೂ 126 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 4327ಕ್ಕೆ ಏರಿಕೆಯಾದಂತಾಗಿದೆ.
ಬುಧವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.
ಬೆಂಗಳೂರಿನಲ್ಲಿ ಬರೋಬ್ಬರಿ 2804 ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ಶಿವಮೊಗ್ಗ 915, ಮೈಸೂರು 562, ಬಳ್ಳಾರಿ 537, ಬೆಳಗಾವಿ 379, ಉಡುಪಿ 375, ಧಾರವಾಡ 253, ದಕ್ಷಿಣಕನ್ನಡ 234, ದಾವಣಗೆರೆ 228,ಮಂಡ್ಯ 185, ಗದಗ 149, ಹಾವೇರಿ 137, ಕೊಪ್ಪಳ 133, ರಾಮನಗರ 126, ಉತ್ತರಕನ್ನಡ 119, ಚಾಮರಾಜನಗರ 111, ವಿಜಯಪುರ 107, ಚಿಕ್ಕಮಗಳೂರು 100, ತುಮಕೂರು 94, ಕೋಲಾರ 86, ಚಿಕ್ಕಬಳ್ಳಾಪುರ 73, ಬೆಂಗಳೂರು ಗ್ರಾಮಾಂತರ 68, ಚಿತ್ರದುರ್ಗ 47, ಬೀದರ 43, ಯಾದಗಿರಿ 41, ಕೊಡಗು 38 ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಬುಧವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 56 ಜನ ಸಾವನ್ನಪ್ಪಿದ್ದಾರೆ.
ಧಾರವಾಡ ಹಾಗೂ ಬಳ್ಳಾರಿ 9, ಕೊಪ್ಪಳ 8, ದಾವಣಗೆರೆ 7, ಮೈಸೂರು ಹಾಗೂ ತುಮಕೂರು ತಲಾ 5, ದಕ್ಷಿಣಕನ್ನಡ 4, ಬೆಳಗಾವಿ, ಹಾವೇರಿ, ಕಲಬುರಗಿ ತಲಾ 3, ಶಿವಮೊಗ್ಗ, ವಿಜಯಪುರ, ರಾಯಚೂರು, ಗದಗ ತಲಾ 2, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.