ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 70 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 2798 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 36216 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ880 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 14716 ಜನ ಗುಣಮುಖರಾಗಿದ್ದು, 20883 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 504 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಶನಿವಾರ 70 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 613 ಕ್ಕೆ ಏರಿಕೆಯಾದಂತಾಗಿದೆ.
ಶನಿವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ. ಬೆಂಗಳೂರಿನಲ್ಲಿ ನಿನ್ನೇ 1447 ಜನ ಸೋಂಕಿತರಿದ್ದರೆ ಇಂದು ಬರೋಬ್ಬರಿ 1533 ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ದಕ್ಷಿಣ ಕನ್ನಡ 186, ಉಡುಪಿ 90,ಮೈಸೂರು 83, ತುಮಕೂರು 78, ಧಾರವಾಡ77, ಯಾದಗಿರಿ 74, ದಾವಣಗೆರೆ 72, ಕಲಬರುಗಿ ಹಾಗೂ ಬಳ್ಳಾರಿ ತಲಾ 65, ಬೀದರ 63, ವಿಜಯಪುರ 48, ಉತ್ತರ ಕನ್ನಡ ಹಾಗೂ ಗದಗ ತಲಾ 40, ಬಾಗಲಕೋಟೆ 37, ಹಾಸನ 34, ರಾಮನಗರ 30, ಶಿವಮೊಗ್ಗ 26, ಮಂಡ್ಯ ಹಾಗೂ ಕೊಪ್ಪಳ ತಲಾ 23, ಚಿಕ್ಕಬಳ್ಳಾಪುರ 20, ಚಾಮರಾಜನಗರ 17, ಹಾವೇರಿ 16, ರಾಯಚೂರು 14, ಕೋಲಾರ ಹಾಗೂ ಕೊಡಗು ತಲಾ 12, ಚಿತ್ರದುರ್ಗ 9, ಬೆಂಗಳೂರು ಗ್ರಾಮಾಂತರ 5, ಬೆಳಗಾವಿ ಹಾಗೂ ಚಿಕ್ಕಮಗಳೂರು ತಲಾ 3 ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಶನಿವಾರವೂ ಮುಂದುವರೆದಿದ್ದುರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 26 ಜನ ಸಾವನ್ನಪ್ಪಿದ್ದಾರೆ. ಮೈಸೂರು, ರಾಮನಗರ, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ದಕ್ಷಿಣ ಕನ್ನಡ ಹಾಗೂ ಧಾರವಾಡ ಸೇರಿದಂತೆ ರಾಜ್ಯದಲ್ಲಿ ಒಟ್ಟು ಶನಿವಾರ 70 ಜನ ಸಾವನ್ನಪ್ಪಿದ್ದಾರೆ.