ರಾಜ್ಯ

ಕುಂದಗೋಳ ತಾಲೂಕಿನ ನೂತನ ಕಸಾಪ ಅಧ್ಯಕ್ಷರ ನೇಮಕಕ್ಕೆ ಹೈಕೋರ್ಟ್ ತಡೆ

*ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ತೀವ್ರ ಮುಖಭಂಗ*

*ಕೇಂದ್ರ ಕಸಾಪ ಪರವಾನಿಗೆ ಪಡೆಯದೆ ಅಧ್ಯಕ್ಷ ಸ್ಥಾನ ಬದಲಾವಣೆ*

*ಕಸಾಪ ನಿಯಮಗಳನ್ನು ಗಾಳಿಗೆ ತೂರಿದ ಆರೋಪ*

ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲಿಂಗರಾಜ ಅಂಗಡಿ ಅವರು ಕಸಾಪ ನಿಯಮಗಳನ್ನು ಗಾಳಿಗೆ ತೂರಿ ಸರ್ವಾಧಿಕಾರಿ ಧೋರಣೆ ಅನುಸರಿಸಿ ಕುಂದಗೋಳ ತಾಲೂಕಿನ ಅಧ್ಯಕ್ಷರಾಗಿ ನೇಮಕಗೊಂಡ ಡಾ. ಪ್ರಭುಗೌಡ ಸಂಕಾಗೌಡಶ್ಯಾನಿ ಅವರನ್ನು ಒಂದು ವರ್ಷದ ಅವಧಿ ಪೂರ್ಣ ಗೊಳಿಸಿದ ಹಿನ್ನೆಲೆಯಲ್ಲಿ ರದ್ದುಗೊಳಿಸಿದ್ದರು.

ಅವರ ಸ್ಥಾನಕ್ಕೆ ನೂತನ ಅಧ್ಯಕ್ಷರಾಗಿ ವೀರೇಶ ಪ್ರಳಯಕಲ್ಮಠ ಅವರನ್ನು ನಿಯೋಜಿಸಿ ಲಿಂಗರಾಜ ಅಂಗಡಿ ಆದೇಶವನ್ನು ನೀಡಿದ್ದರು.

ಇದನ್ನು ಪ್ರಶ್ನಿಸಿ ಕುಂದಗೋಳ ತಾಲೂಕಿನ ಅಧ್ಯಕ್ಷ ಡಾ. ಪ್ರಭುಗೌಡ ಸಂಕಾಗೌಡಶ್ಯಾನಿ ಹೈಕೋರ್ಟ್ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಸಚಿನ್ ಮಗದುಮ್ ಅವರು ಇದಕ್ಕೆ ತಡೆಯಾಜ್ಞೆ ನೀಡಿ ಮಹತ್ವದ ಆದೇಶ ಹೊರಡಿಸಿದ್ದಾರೆ‌.

ಅಲ್ಲದೆ, ಧಾರವಾಡ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲಿಂಗರಾಜ ಅಂಗಡಿ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ದ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ದಿ. 24-1-2022ರಂದು
ಕನ್ನಡ ಸಾಹಿತ್ಯ ಪರಿಷತ್ತಿನ ಕುಂದಗೋಳ
ತಾಲೂಕಿನ ಅಧ್ಯಕ್ಷರ ನೇಮಕಾತಿ ಮಾಡಿದ್ದ ಆದೇಶವನ್ನು ಎತ್ತಿ ಹಿಡಿದಿದ್ದಾರೆ.

ಅವರು 14-4-2023ರಂದು ಧಾರವಾಡ ಜಿಲ್ಲೆಯ
ಕಸಾಪ ಅಧ್ಯಕ್ಷ ಲಿಂಗರಾಜ ಅಂಗಡಿ ತಮಗೆ ಅಧಿಕಾರವಿಲ್ಲದೆಯಿದ್ದರೂ ಕೇಂದ್ರ ಕಸಾಪ ಪರವಾನಿಗೆಯನ್ನು ಪಡೆಯದೆ ಅವರ ಸ್ಥಾನಕ್ಕೆ
ವಿರೇಶ ಪ್ರಳಯಕಲ್ಮಠ ಅವರನ್ನು ನಿಯುಕ್ತಿ ಮಾಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದು ಧಾರವಾಡ ಜಿಲ್ಲೆಯ ಇನ್ನುಳಿದ ತಾಲೂಕಿನ ಅಧ್ಯಕ್ಷ ಸ್ಥಾನಕ್ಕೆ ಕೂಡ ಕುತ್ತು ಬರುವ ಸಾಧ್ಯತೆ ಅಲ್ಲಗೆಳೆಯುವಂತಿಲ್ಲ.

ಅರ್ಜಿದಾರ ಡಾ. ಪ್ರಭುಗೌಡ ಸಂಕಾಗೌಡಶ್ಯಾನಿ ಅವರ ಪರವಾಗಿ ಹಿರಿಯ ವಕೀಲರಾದ ಎ.ಆರ್. ಪಾಟೀಲ ಪ್ರಬಲ ವಾದ ಮಂಡಿಸಿ ಹೈಕೋರ್ಟ್ ಗಮನ ಸೆಳೆದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *